ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಆನ್ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ಕರ್ನಾಟಕದಲ್ಲೂ ರಾಜ್ಯ ಔಷಧಿ ಮಾರಾಟ ವ್ಯಾಪಾರಿಗಳ ಸಂಘ ಬಂದ್ಗೆ ಬೆಂಬಲ ನೀಡಿದ್ದು, ರಾಜ್ಯಾದ್ಯಂತ 26,000ಕ್ಕೂ ಅಧಿಕ ಮೆಡಿಕಲ್ಗಳು ಇಂದು ಬಂದ್ ಆಗಲಿವೆ. ಒಂದು ದಿನದ ಮಟ್ಟಿಗೆ ಸಂಪೂರ್ಣ ಮೆಡಿಕಲ್ಗಳು ಬಂದ್ ಆಗಲಿವೆ. ಬೆಂಗಳೂರು ಫಾರ್ಮ್ ರಿಟೈಲರ್ಸ್ & ಡಿಸ್ಟ್ರಿಬ್ಯೂಟರ್ಸ್ ಫೋರಂನ ಸಂಘದಿಂದ ಹೊರಬಂದ ಕೆಲವರು ಪ್ರತ್ಯೇಕ ಸಂಘ ರಚಿಸಿ ಬಂದ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಮೆಡಿಕಲ್ ಮಾಲೀಕರೇ ಬಂದ್ಗೆ ಬೆಂಬಲಿಸಿ ಮೆಡಿಕಲ್ಗಳನ್ನು ಮುಚ್ಚಿದ್ದಾರೆ.
ಬಂದ್ನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲವು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಒಳಗೆ ಇರುವ ಫಾರ್ಮಸಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಗಂಭೀರ ಪರಿಸ್ಥಿತಿಗಳಲ್ಲಿ ಅಗತ್ಯ ಔಷಧಿಗಳನ್ನು ಒದಗಿಸಲು ಆಯ್ದ ಪ್ರಮುಖ ಕೇಂದ್ರಗಳಲ್ಲಿ ತುರ್ತು ಕೌಂಟರ್ಗಳು ತೆರೆದಿರುತ್ತವೆ. ತುರ್ತು ಸಂದರ್ಭ ಬಂದ್ರೆ ಆಸ್ಪತ್ರೆಯ ಫಾರ್ಮಸಿಗಳು ಓಪನ್ ಇರಲಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…