ಉಡುಪಿ : ಕೇಂದ್ರ ಸರಕಾರದ ಇ-ಶ್ರಮ್ ಪೋರ್ಟಲ್ನಲ್ಲಿ ಜಿಲ್ಲೆಯ 1,05,439 ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯ ಸೇವಾ ಕೇಂದ್ರದಲ್ಲಿ 16, ಸಾಮಾನ್ಯ ಸೇವಾ ಕೇಂದ್ರದಲ್ಲಿ ಸಿಎಸ್ಸಿ 62,913, ಸ್ವಯಂ ನೋಂದಣಿ 42,510 ಆಗಿದೆ.
ಅಸಂಘಟಿತ ವಲಯದ ಕಾರ್ಮಿಕರ ಎಲ್ಲ ಮಾಹಿತಿ, ಡೇಟಾವನ್ನು ಟ್ರ್ಯಾಕ್ ಮಾಡಲು ಮತ್ತು ಸಂಗ್ರಹಿಸಲು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಈ ಪೋರ್ಟಲ್ ಆರಂಭಸಿದೆ.
ಅಸಂಘಟಿತ ವಲಯದ ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಮನೆ ಕೆಲಸ ಗಾರರು, ಕೃಷಿ ಕಾರ್ಮಿಕರು ಸೇರಿ ವಿವಿಧ ವಲಯ ದಲ್ಲಿರುವ ಅಸಂಘಟಿತ ಕಾರ್ಮಿಕರು ಇ-ಶ್ರಮ್ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ.
ನೋಂದಣಿಯಾದ ಅನಂತರ ಸರಕಾರದಿಂದ ಇ-ಶ್ರಮ್ ಕಾರ್ಡ್ ನೀಡಲಾಗುತ್ತದೆ. ಕಾರ್ಮಿಕನು ಸರಕಾರದ ಯೋಜನೆಗಳ ಪ್ರಯೋಜನವನ್ನು ನೇರವಾಗಿ ಪಡೆಯಲು ಸಾಧ್ಯವಾಗುತ್ತದೆ.
ಮಾನದಂಡ ಹಾಗೂ ದಾಖಲೆ
ಇ-ಶ್ರಮ್ ಕಾರ್ಡ್ ನೋಂದಣಿ ಮಾಡಿಸಿ ಕೊಳ್ಳುವವರ ವಯೋಮಿತಿ 16-59 ವರ್ಷಗಳ ನಡುವೆ ಇರಬೇಕು. ಇಪಿಎಫ್ಒ ಅಥವಾ ಇಎಸ್ಐಸಿ ಸದಸ್ಯರಾಗಿರಬಾರದು. ಆದಾಯ ತೆರಿಗೆ ಪಾವತಿಸುವವರಾಗಿರಬಾರದು. ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರಬೇಕು. ಇಂತಹ ವರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ವಿದ್ಯುತ್ ಬಿಲ./ಪಡಿತರ ಚೀಟಿ, ಮೊಬೈಲ್ ಸಂಖ್ಯೆಯನ್ನು ನೀಡಬೇಕು.
ಯಾರು ಅರ್ಹರು?
ಸಣ್ಣ ಮತ್ತು ಅತಿ ಸಣ್ಣ ರೈತರು, ಕೃಷಿ ಕಾರ್ಮಿಕರು, ಬೆಳೆಗಾರು, ಮೀನುಗಾರರು, ಪಶು ಸಂಗೋಪನೆಯಲ್ಲಿ ತೊಡಗಿರುವವರು, ಬೀಡಿಕಟ್ಟುವವರು, ಲೇಬಲ್ ಮತ್ತು ಪ್ಯಾಕಿಂಗ್, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು, ಚರ್ಮದ ಕೆಲಸಗಾರರು, ನೇಕಾರರು, ಬಡಗಿ, ಇಟ್ಟಿಗೆ ಹಾಗೂ ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವವರು, ಗರಗಸದ ಕಾರ್ಖಾನೆಯಲ್ಲಿ ಕೆಲಸ ಮಾಡುವವರು, ಶುಶ್ರೂಷಕಿಯರು, ಗೃಹ ಕಾರ್ಮಿಕರು, ûೌರಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಸುದ್ದಿ ಪತ್ರಿಕೆ ಮಾರಾಟಗಾರರು, ಆಟೋ ಚಾಲಕರು, ರೇಷ್ಮೆ ಕೃಷಿ ಕಾರ್ಮಿಕರು, ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ವಲಸೆ ಕಾರ್ಮಿಕರು.
ನೋಂದಣಿ ಹೇಗೆ?
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇ-ಶ್ರಮ್ ಪೋರ್ಟಲ್ಗೆ ಅರ್ಜಿ ಸಲ್ಲಿಸುವವರಿಗೆ ವಿಶಿಷ್ಟ ಗುರುತು ಸಂಖ್ಯೆ ಕಾರ್ಡ್ ಒದಗಿಸುತ್ತದೆ. ಇ-ಶ್ರಮ್ ಪೋರ್ಟಲ್ ನೋಂದಣಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮೀ ಪದ ಸಾಮಾನ್ಯ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಧಾರ್ ಕಾರ್ಡ್ಗೆ ಲಿಂಕ್ ಮಾಡಿದ ಮೊ. ಸಂಖ್ಯೆಯನ್ನು ಬಳಸಿಕೊಂಡು ಇ ಶ್ರಮ್ ಪೋರ್ಟಲ್ನಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದು.
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…