Featured

ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರ್ತೀನಿ : ಸಿದ್ದರಾಮಯ್ಯ – vishwanews24

ಎರಡೂವರೆ ವರ್ಷ ಸಿಎಂ ಅಂತ ಹೇಳೇ ಇಲ್ಲ, ಆ ತೀರ್ಮಾನ ಆಗಿಲ್ಲ ..

ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ ..

ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ರಾಜಕೀಯ ನಿಶ್ಯಕ್ತಿ ಇಲ್ಲ ..

ಅಧಿವೇಶನದಲ್ಲಿ ಕಾಂಗ್ರೆಸ್ ಕುರ್ಚಿ ಕದನಕ್ಕೆ ಸಿಎಂ ಕ್ಲ್ಯಾರಿಟಿ

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ.

ಇನ್ನೂ ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ  ಕುರ್ಚಿ ಕದನಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತಾ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಫುಲ್ ಟರ್ಮ್ ಸಿಎಂ ಬ್ರಹ್ಮಾಸ್ತ್ರಾ ಪ್ರಯೋಗಿಸಿದ್ದಾರೆ.

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಚರ್ಚೆಗೆ ಉತ್ತರ ಕೊಡುವ ವೇಳೆ, ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳನ್ನೇ ಮೆಟ್ಟಿಲುಗಳನ್ನಾಡಿ ಮಾಡಿಕೊಂಡ ಸಿಎಂ, ಪಕ್ಷದೊಳಗಿನ ವಿರೋಧಿಗಳಿಗೂ ಗುನ್ನಾ ಹೊಡೆದಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿದ್ದೇನೆ ಅಂತ ವಿಪಕ್ಷ ನಾಯಕ ಅಶೋಕ್‌ಗೆ ತಿರುಗೇಟು ಕೊಟ್ಟಿದ್ದಾರೆ.

ಎರಡೂವರೆ ವರ್ಷಕ್ಕೆ ಅಂತ ಹೇಳೇ ಇಲ್ಲ, ಆ ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರ್ತೀನಿ. ಈಗ ನಾನು ಸಿಎಂ ಆಗಿದ್ದೇನೆ, ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ. ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ರಾಜಕೀಯ ನಿಶ್ಯಕ್ತಿ ಇಲ್ಲ, ಈಗಲೂ ಇಲ್ಲ, ಮುಂದೆಯೂ ಇಲ್ಲ, ಹಿಂದೆಯೂ ಇರಲಿಲ್ಲ. ಜನರ ಆಶೀರ್ವಾದ ಇದ್ದರೆ ಮಾತ್ರ ಅಧಿಕಾರ, ನಾನು ಹಣೆಬರಹದಲ್ಲಿ ನಂಬಿಕೆ ಇಟ್ಟಿಲ್ಲ ಎಂದರಲ್ಲದೇ ನಮಗೆ ಯಾರೂ ನಿರ್ದೇಶನ ಕೊಡೋರು ಇಲ್ಲ, ನಮಗೆ ನಾವೇ ನಿರ್ದೇಶಕರು, ನಾವೇ ಪ್ರೊಡ್ಯೂಸರ್, ನಾವೇ ಆ್ಯಕ್ಟರ್‌ಗಳು ಅಂತ ಅಧಿಕಾರ ಹಂಚಿಕೆ ಮಾತುಕತೆಗೆ ಬ್ರೇಕ್‌ ಹಾಕಿದ್ದಾರೆ.
Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago