Featured

ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರ್ತೀನಿ : ಸಿದ್ದರಾಮಯ್ಯ – vishwanews24

ಎರಡೂವರೆ ವರ್ಷ ಸಿಎಂ ಅಂತ ಹೇಳೇ ಇಲ್ಲ, ಆ ತೀರ್ಮಾನ ಆಗಿಲ್ಲ ..

ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ ..

ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ರಾಜಕೀಯ ನಿಶ್ಯಕ್ತಿ ಇಲ್ಲ ..

ಅಧಿವೇಶನದಲ್ಲಿ ಕಾಂಗ್ರೆಸ್ ಕುರ್ಚಿ ಕದನಕ್ಕೆ ಸಿಎಂ ಕ್ಲ್ಯಾರಿಟಿ

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ.

ಇನ್ನೂ ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ  ಕುರ್ಚಿ ಕದನಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತಾ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಫುಲ್ ಟರ್ಮ್ ಸಿಎಂ ಬ್ರಹ್ಮಾಸ್ತ್ರಾ ಪ್ರಯೋಗಿಸಿದ್ದಾರೆ.

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಚರ್ಚೆಗೆ ಉತ್ತರ ಕೊಡುವ ವೇಳೆ, ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳನ್ನೇ ಮೆಟ್ಟಿಲುಗಳನ್ನಾಡಿ ಮಾಡಿಕೊಂಡ ಸಿಎಂ, ಪಕ್ಷದೊಳಗಿನ ವಿರೋಧಿಗಳಿಗೂ ಗುನ್ನಾ ಹೊಡೆದಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿದ್ದೇನೆ ಅಂತ ವಿಪಕ್ಷ ನಾಯಕ ಅಶೋಕ್‌ಗೆ ತಿರುಗೇಟು ಕೊಟ್ಟಿದ್ದಾರೆ.

ಎರಡೂವರೆ ವರ್ಷಕ್ಕೆ ಅಂತ ಹೇಳೇ ಇಲ್ಲ, ಆ ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರ್ತೀನಿ. ಈಗ ನಾನು ಸಿಎಂ ಆಗಿದ್ದೇನೆ, ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ. ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ರಾಜಕೀಯ ನಿಶ್ಯಕ್ತಿ ಇಲ್ಲ, ಈಗಲೂ ಇಲ್ಲ, ಮುಂದೆಯೂ ಇಲ್ಲ, ಹಿಂದೆಯೂ ಇರಲಿಲ್ಲ. ಜನರ ಆಶೀರ್ವಾದ ಇದ್ದರೆ ಮಾತ್ರ ಅಧಿಕಾರ, ನಾನು ಹಣೆಬರಹದಲ್ಲಿ ನಂಬಿಕೆ ಇಟ್ಟಿಲ್ಲ ಎಂದರಲ್ಲದೇ ನಮಗೆ ಯಾರೂ ನಿರ್ದೇಶನ ಕೊಡೋರು ಇಲ್ಲ, ನಮಗೆ ನಾವೇ ನಿರ್ದೇಶಕರು, ನಾವೇ ಪ್ರೊಡ್ಯೂಸರ್, ನಾವೇ ಆ್ಯಕ್ಟರ್‌ಗಳು ಅಂತ ಅಧಿಕಾರ ಹಂಚಿಕೆ ಮಾತುಕತೆಗೆ ಬ್ರೇಕ್‌ ಹಾಕಿದ್ದಾರೆ.
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago