Featured

ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರ್ತೀನಿ : ಸಿದ್ದರಾಮಯ್ಯ – vishwanews24

ಎರಡೂವರೆ ವರ್ಷ ಸಿಎಂ ಅಂತ ಹೇಳೇ ಇಲ್ಲ, ಆ ತೀರ್ಮಾನ ಆಗಿಲ್ಲ ..

ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ ..

ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ರಾಜಕೀಯ ನಿಶ್ಯಕ್ತಿ ಇಲ್ಲ ..

ಅಧಿವೇಶನದಲ್ಲಿ ಕಾಂಗ್ರೆಸ್ ಕುರ್ಚಿ ಕದನಕ್ಕೆ ಸಿಎಂ ಕ್ಲ್ಯಾರಿಟಿ

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ.

ಇನ್ನೂ ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ  ಕುರ್ಚಿ ಕದನಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತಾ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಫುಲ್ ಟರ್ಮ್ ಸಿಎಂ ಬ್ರಹ್ಮಾಸ್ತ್ರಾ ಪ್ರಯೋಗಿಸಿದ್ದಾರೆ.

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಚರ್ಚೆಗೆ ಉತ್ತರ ಕೊಡುವ ವೇಳೆ, ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳನ್ನೇ ಮೆಟ್ಟಿಲುಗಳನ್ನಾಡಿ ಮಾಡಿಕೊಂಡ ಸಿಎಂ, ಪಕ್ಷದೊಳಗಿನ ವಿರೋಧಿಗಳಿಗೂ ಗುನ್ನಾ ಹೊಡೆದಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿದ್ದೇನೆ ಅಂತ ವಿಪಕ್ಷ ನಾಯಕ ಅಶೋಕ್‌ಗೆ ತಿರುಗೇಟು ಕೊಟ್ಟಿದ್ದಾರೆ.

ಎರಡೂವರೆ ವರ್ಷಕ್ಕೆ ಅಂತ ಹೇಳೇ ಇಲ್ಲ, ಆ ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರ್ತೀನಿ. ಈಗ ನಾನು ಸಿಎಂ ಆಗಿದ್ದೇನೆ, ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ. ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ರಾಜಕೀಯ ನಿಶ್ಯಕ್ತಿ ಇಲ್ಲ, ಈಗಲೂ ಇಲ್ಲ, ಮುಂದೆಯೂ ಇಲ್ಲ, ಹಿಂದೆಯೂ ಇರಲಿಲ್ಲ. ಜನರ ಆಶೀರ್ವಾದ ಇದ್ದರೆ ಮಾತ್ರ ಅಧಿಕಾರ, ನಾನು ಹಣೆಬರಹದಲ್ಲಿ ನಂಬಿಕೆ ಇಟ್ಟಿಲ್ಲ ಎಂದರಲ್ಲದೇ ನಮಗೆ ಯಾರೂ ನಿರ್ದೇಶನ ಕೊಡೋರು ಇಲ್ಲ, ನಮಗೆ ನಾವೇ ನಿರ್ದೇಶಕರು, ನಾವೇ ಪ್ರೊಡ್ಯೂಸರ್, ನಾವೇ ಆ್ಯಕ್ಟರ್‌ಗಳು ಅಂತ ಅಧಿಕಾರ ಹಂಚಿಕೆ ಮಾತುಕತೆಗೆ ಬ್ರೇಕ್‌ ಹಾಕಿದ್ದಾರೆ.
Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago