ಮುಜಾಫರ್ನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡಿದ್ದರಿಂದ ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು ಎಂದು ಬಿಜೆಪಿ ಶಾಸಕ ವಿಕ್ರಮ್ ಸೈನಿ, ಹೇಳಿದ್ದಾರೆ.
ಉತ್ತರ ಪ್ರದೇಶದ ಬಿಜೆಪಿ ಶಾಸಕರಾಗಿದ್ದಾರೆ ವಿಕ್ರಮ್ ಸೈನಿ. ಸಂವಿಧಾನದ 370ನೇ ವಿಧಿ ರದ್ದು ಪಡಿಸಿರುವ ನಿರ್ಧಾರವನ್ನು ಸ್ವಾಗತಿ ಮುಜಾಫರ್ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೈನಿ, ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡ ಈ ನಿರ್ಧಾರದಿಂದಾಗಿ ಬಿಜೆಪಿ ಕಾರ್ಯಕರ್ತರು ಅಲ್ಲಿಗೆ ಹೋಗಿ ಅಲ್ಲಿ ಜಮೀನು ಖರೀದಿಸಬಹುದು. ಅಲ್ಲಿಯವರನ್ನು ಮದುವೆಯಾಗಬಹುದು ಎಂದಿದ್ದಾರೆ.
ನಮ್ಮ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ. ಮದುವೆಯಾಗದ ಯುವಕರು ಅಲ್ಲಿಗೆ ಹೋಗಿ ಮದುವೆಯಾಗಬಹುದು. ಅಲ್ಲಿ ಈಗ ಯಾವುದೇ ಸಮಸ್ಯೆಗಳಿಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ತುಂಬಾ ದಬ್ಬಾಳಿಕೆ ನಡೆಯುತ್ತಿತ್ತು. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಯುವಕನನ್ನು ಮದುವೆಯಾದರೆ ಆಕೆಯ ಪೌರತ್ವ ರದ್ದು ಆಗುತ್ತಿತ್ತು. ಭಾರತ ಮತ್ತು ಕಾಶ್ಮೀರದಲ್ಲಿ ಬೇರೆ ಬೇರೆ ಪೌರತ್ವ ಇದೆ ಎಂದು ಸೈನಿ ಹೇಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಮುಸ್ಲಿಂ ಕಾರ್ಯಕರ್ತರು ಸಂಭ್ರಮಿಸಬೇಕು. ಬೆಳ್ಳಗಿರುವ ಕಾಶ್ಮೀರದ ಯುವತಿಯರನ್ನು ಅವರು ಮದುವೆಯಾಗಬಹುದು. ಅಲ್ಲಿಯೂ ಸಂಭ್ರಮಾಚರಣೆ ಮಾಡಬೇಕು. ಹಿಂದೂ ಆಗಲೀ, ಮುಸ್ಲಿಂ ಆಗಲೀ ಎಲ್ಲರೂ ಸಂಭ್ರಮಿಸಬೇಕು. ಇಡೀ ದೇಶವೇ ಸಂಭ್ರಮಿಸಬೇಕಾದ ವಿಷಯ ಇದು ಎಂದು ಸೈನಿ ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…