ಮುಜಾಫರ್ನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡಿದ್ದರಿಂದ ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು ಎಂದು ಬಿಜೆಪಿ ಶಾಸಕ ವಿಕ್ರಮ್ ಸೈನಿ, ಹೇಳಿದ್ದಾರೆ.
ಉತ್ತರ ಪ್ರದೇಶದ ಬಿಜೆಪಿ ಶಾಸಕರಾಗಿದ್ದಾರೆ ವಿಕ್ರಮ್ ಸೈನಿ. ಸಂವಿಧಾನದ 370ನೇ ವಿಧಿ ರದ್ದು ಪಡಿಸಿರುವ ನಿರ್ಧಾರವನ್ನು ಸ್ವಾಗತಿ ಮುಜಾಫರ್ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೈನಿ, ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡ ಈ ನಿರ್ಧಾರದಿಂದಾಗಿ ಬಿಜೆಪಿ ಕಾರ್ಯಕರ್ತರು ಅಲ್ಲಿಗೆ ಹೋಗಿ ಅಲ್ಲಿ ಜಮೀನು ಖರೀದಿಸಬಹುದು. ಅಲ್ಲಿಯವರನ್ನು ಮದುವೆಯಾಗಬಹುದು ಎಂದಿದ್ದಾರೆ.
ನಮ್ಮ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ. ಮದುವೆಯಾಗದ ಯುವಕರು ಅಲ್ಲಿಗೆ ಹೋಗಿ ಮದುವೆಯಾಗಬಹುದು. ಅಲ್ಲಿ ಈಗ ಯಾವುದೇ ಸಮಸ್ಯೆಗಳಿಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ತುಂಬಾ ದಬ್ಬಾಳಿಕೆ ನಡೆಯುತ್ತಿತ್ತು. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಯುವಕನನ್ನು ಮದುವೆಯಾದರೆ ಆಕೆಯ ಪೌರತ್ವ ರದ್ದು ಆಗುತ್ತಿತ್ತು. ಭಾರತ ಮತ್ತು ಕಾಶ್ಮೀರದಲ್ಲಿ ಬೇರೆ ಬೇರೆ ಪೌರತ್ವ ಇದೆ ಎಂದು ಸೈನಿ ಹೇಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಮುಸ್ಲಿಂ ಕಾರ್ಯಕರ್ತರು ಸಂಭ್ರಮಿಸಬೇಕು. ಬೆಳ್ಳಗಿರುವ ಕಾಶ್ಮೀರದ ಯುವತಿಯರನ್ನು ಅವರು ಮದುವೆಯಾಗಬಹುದು. ಅಲ್ಲಿಯೂ ಸಂಭ್ರಮಾಚರಣೆ ಮಾಡಬೇಕು. ಹಿಂದೂ ಆಗಲೀ, ಮುಸ್ಲಿಂ ಆಗಲೀ ಎಲ್ಲರೂ ಸಂಭ್ರಮಿಸಬೇಕು. ಇಡೀ ದೇಶವೇ ಸಂಭ್ರಮಿಸಬೇಕಾದ ವಿಷಯ ಇದು ಎಂದು ಸೈನಿ ಹೇಳಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…