ಮುಜಾಫರ್ನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡಿದ್ದರಿಂದ ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು ಎಂದು ಬಿಜೆಪಿ ಶಾಸಕ ವಿಕ್ರಮ್ ಸೈನಿ, ಹೇಳಿದ್ದಾರೆ.
ಉತ್ತರ ಪ್ರದೇಶದ ಬಿಜೆಪಿ ಶಾಸಕರಾಗಿದ್ದಾರೆ ವಿಕ್ರಮ್ ಸೈನಿ. ಸಂವಿಧಾನದ 370ನೇ ವಿಧಿ ರದ್ದು ಪಡಿಸಿರುವ ನಿರ್ಧಾರವನ್ನು ಸ್ವಾಗತಿ ಮುಜಾಫರ್ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೈನಿ, ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡ ಈ ನಿರ್ಧಾರದಿಂದಾಗಿ ಬಿಜೆಪಿ ಕಾರ್ಯಕರ್ತರು ಅಲ್ಲಿಗೆ ಹೋಗಿ ಅಲ್ಲಿ ಜಮೀನು ಖರೀದಿಸಬಹುದು. ಅಲ್ಲಿಯವರನ್ನು ಮದುವೆಯಾಗಬಹುದು ಎಂದಿದ್ದಾರೆ.
ನಮ್ಮ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ. ಮದುವೆಯಾಗದ ಯುವಕರು ಅಲ್ಲಿಗೆ ಹೋಗಿ ಮದುವೆಯಾಗಬಹುದು. ಅಲ್ಲಿ ಈಗ ಯಾವುದೇ ಸಮಸ್ಯೆಗಳಿಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ತುಂಬಾ ದಬ್ಬಾಳಿಕೆ ನಡೆಯುತ್ತಿತ್ತು. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಯುವಕನನ್ನು ಮದುವೆಯಾದರೆ ಆಕೆಯ ಪೌರತ್ವ ರದ್ದು ಆಗುತ್ತಿತ್ತು. ಭಾರತ ಮತ್ತು ಕಾಶ್ಮೀರದಲ್ಲಿ ಬೇರೆ ಬೇರೆ ಪೌರತ್ವ ಇದೆ ಎಂದು ಸೈನಿ ಹೇಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಮುಸ್ಲಿಂ ಕಾರ್ಯಕರ್ತರು ಸಂಭ್ರಮಿಸಬೇಕು. ಬೆಳ್ಳಗಿರುವ ಕಾಶ್ಮೀರದ ಯುವತಿಯರನ್ನು ಅವರು ಮದುವೆಯಾಗಬಹುದು. ಅಲ್ಲಿಯೂ ಸಂಭ್ರಮಾಚರಣೆ ಮಾಡಬೇಕು. ಹಿಂದೂ ಆಗಲೀ, ಮುಸ್ಲಿಂ ಆಗಲೀ ಎಲ್ಲರೂ ಸಂಭ್ರಮಿಸಬೇಕು. ಇಡೀ ದೇಶವೇ ಸಂಭ್ರಮಿಸಬೇಕಾದ ವಿಷಯ ಇದು ಎಂದು ಸೈನಿ ಹೇಳಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…