Featured

ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು : ಬಿಜೆಪಿ ಶಾಸಕ ವಿಕ್ರಮ್ ಸೈನಿ -Vishwanews24

ಮುಜಾಫರ್‌ನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡಿದ್ದರಿಂದ ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು ಎಂದು  ಬಿಜೆಪಿ ಶಾಸಕ ವಿಕ್ರಮ್ ಸೈನಿ, ಹೇಳಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಶಾಸಕರಾಗಿದ್ದಾರೆ ವಿಕ್ರಮ್ ಸೈನಿ. ಸಂವಿಧಾನದ 370ನೇ ವಿಧಿ ರದ್ದು ಪಡಿಸಿರುವ ನಿರ್ಧಾರವನ್ನು ಸ್ವಾಗತಿ ಮುಜಾಫರ್‌ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೈನಿ,  ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡ ಈ ನಿರ್ಧಾರದಿಂದಾಗಿ ಬಿಜೆಪಿ ಕಾರ್ಯಕರ್ತರು ಅಲ್ಲಿಗೆ ಹೋಗಿ ಅಲ್ಲಿ ಜಮೀನು ಖರೀದಿಸಬಹುದು. ಅಲ್ಲಿಯವರನ್ನು ಮದುವೆಯಾಗಬಹುದು ಎಂದಿದ್ದಾರೆ.

ನಮ್ಮ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ. ಮದುವೆಯಾಗದ ಯುವಕರು ಅಲ್ಲಿಗೆ ಹೋಗಿ ಮದುವೆಯಾಗಬಹುದು. ಅಲ್ಲಿ ಈಗ ಯಾವುದೇ ಸಮಸ್ಯೆಗಳಿಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ತುಂಬಾ ದಬ್ಬಾಳಿಕೆ ನಡೆಯುತ್ತಿತ್ತು. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಯುವಕನನ್ನು ಮದುವೆಯಾದರೆ ಆಕೆಯ ಪೌರತ್ವ ರದ್ದು ಆಗುತ್ತಿತ್ತು. ಭಾರತ ಮತ್ತು ಕಾಶ್ಮೀರದಲ್ಲಿ ಬೇರೆ ಬೇರೆ ಪೌರತ್ವ ಇದೆ ಎಂದು ಸೈನಿ ಹೇಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಮುಸ್ಲಿಂ ಕಾರ್ಯಕರ್ತರು ಸಂಭ್ರಮಿಸಬೇಕು. ಬೆಳ್ಳಗಿರುವ ಕಾಶ್ಮೀರದ ಯುವತಿಯರನ್ನು ಅವರು ಮದುವೆಯಾಗಬಹುದು. ಅಲ್ಲಿಯೂ ಸಂಭ್ರಮಾಚರಣೆ ಮಾಡಬೇಕು. ಹಿಂದೂ ಆಗಲೀ, ಮುಸ್ಲಿಂ ಆಗಲೀ ಎಲ್ಲರೂ ಸಂಭ್ರಮಿಸಬೇಕು. ಇಡೀ ದೇಶವೇ ಸಂಭ್ರಮಿಸಬೇಕಾದ ವಿಷಯ ಇದು ಎಂದು ಸೈನಿ  ಹೇಳಿದ್ದಾರೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

17 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

17 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

18 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

18 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

18 hours ago