Featured

ಈಗ ಬಿಜೆಪಿಯವರು ನಾಟಕ ಆಡಲು ಶುರು ಮಾಡಿದ್ದಾರೆ, ಹರ್ ಘರ್ ತಿರಂಗಾ ಎಂಬುದು ನಾಟಕ : ಸಿದ್ದರಾಮಯ್ಯ – Vishwanews24

ಇವತ್ತು ನಾವು ಸ್ವಾತಂತ್ರ್ಯ ಆಗಿರುವುದಕ್ಕೆ ಕಾಂಗ್ರೆಸ್ ‌ಕಾರಣ..

ಈಗ ಬಿಜೆಪಿಯವರು ನಾಟಕ ಆಡಲು ಶುರು ಮಾಡಿದ್ದಾರೆ, ಹರ್ ಘರ್ ತಿರಂಗಾ ಎಂಬುದು

ನಾಟಕ..

ನರೇಂದ್ರ ಮೋದಿ ದೊಡ್ಡ ನಾಟಕಕಾರ, ನಕಲಿ ದೇಶ ಪ್ರೇಮಿಗಳ‌ ಬಾಯಿ ಮುಚ್ಚಿಸುವ ಕೆಲಸ

ಮಾಡಬೇಕಿದೆ..

ಚಳಿ ಬಿಟ್ಟು ಎದ್ದು ನಿಂತು ಹೋರಾಟ ಮಾಡಬೇಕು. ಜನರಿಗೆ ಸತ್ಯ ತಿಳಿಸಬೇಕು..

ಬೆಂಗಳೂರು: ನಕಲಿ ದೇಶ ಪ್ರೇಮಿಗಳ‌ ಬಾಯಿ ಮುಚ್ಚಿಸುವ ಕೆಲಸ ಮಾಡಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕ್ವಿಟ್ ಇಂಡಿಯಾ ಚಳವಳಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಆರ್ ಎಸ್ ಎಸ್ ಕಚೇರಿಯಲ್ಲಿ ತ್ರಿವರ್ಣ ಧ್ವಜ ಹಾರಿಸಿರಲಿಲ್ಲ. ಬಳಿಕ ಇಬ್ಬರು ಯುವಕರು ಕಚೇರಿಗೆ ತೆರಳಿ ರಾಷ್ಟ್ರ ಧ್ವಜ ಹಾರಿಸಿದ ಬಳಿಕ ಆರ್ ಎಸ್ ಎಸ್ ಕಚೇರಿಯಲ್ಲಿ ತಿರಂಗಾ ಹಾರಿಸಲಾಯಿತು ಎಂದರು‌.

ಆರ್ ಎಸ್ ಎಸ್ ಮೇಲ್ಜಾತಿಯ ಸಂಘಟನೆಯಾಗಿದೆ. ಅವರು ಚಾತುರ್ವರ್ಣ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟವರು. ಅದು ಮುಂದುವರಿದರೆ ಶೋಷಣೆ ಮುಂದುವರಿಯುತ್ತದೆ ಎಂದರು.

ದ್ವೇಷ ಭಕ್ತರನ್ನು ದೇಶ ಬಿಟ್ಟು ಹೋಗಿ ಎಂದು ಕರೆ ಕೊಡಬೇಕಿದೆ : ಬಿ.ಕೆ. ಹರಿಪ್ರಸಾದ್ – Vishwanews24

ಸಮಾಜದಲ್ಲಿ ಅಸಮಾನತೆಗೆ ಕಾರಣ ನಮ್ಮ ಶ್ರೇಣೀಕೃತ ವ್ಯವಸ್ಥೆ ಹಾಗೂ ಜಾತಿ ವ್ಯವಸ್ಥೆ ಕಾರಣ. ಆದರೆ, ರಾಷ್ಟ್ರ ಧ್ವಜ, ಸಂವಿಧಾನ ವಿರೋಧ ಮಾಡುವವರು ಇವರಿಗೆ ಹೇಗೆ ದೇಶ ಭಕ್ತಿ ಬರಲು‌‌‌ ಸಾಧ್ಯ? ಎಂದು ಪ್ರಶ್ನಿಸಿದರು.

ಈಗ ಬಿಜೆಪಿಯವರು ನಾಟಕ ಆಡಲು ಶುರು ಮಾಡಿದ್ದಾರೆ. ಹರ್ ಘರ್ ತಿರಂಗಾ ಎಂಬುದು ನಾಟಕ. ಇವತ್ತು ನಾವು ಸ್ವಾತಂತ್ರ್ಯ ಆಗಿರುವುದಕ್ಕೆ ಕಾಂಗ್ರೆಸ್ ‌ಕಾರಣ. ಸಾವರ್ಕರ್ ಮುಚ್ಚಳಿಕೆ ಬರೆದು ಕೊಟ್ಟವರು ಬ್ರಿಟಿಷರಿಗೆ. ಹೆಡ್ಗೇವಾರ್, ಗೋಲ್ವಳ್ಕರ್ ಜೈಲಿಗೆ ಹೋಗಿದ್ದಾರಾ? ಎಂದು ಪ್ರಶ್ನಿಸಿದರು.

ಇವರು ನಮಗೆ ಸ್ವಾತಂತ್ರ್ಯದ ಬಗ್ಗೆ‌ ಭಾಷಣ ಮಾಡುತ್ತಾರೆ. ಇವರಿಗೆ ಯಾವ ನೈತಿಕತೆ ಇದೆ. ನರೇಂದ್ರ ಮೋದಿ ದೊಡ್ಡ ನಾಟಕಕಾರ. ಈ ನಿಟ್ಟಿನಲ್ಲಿ ನಕಲಿ ದೇಶ ಪ್ರೇಮಿಗಳ‌ ಬಾಯಿ ಮುಚ್ಚಿಸುವ ಕೆಲಸ ಮಾಡಬೇಕಿದೆ. ಚಳಿ ಬಿಟ್ಟು ಎದ್ದು ನಿಂತು ಹೋರಾಟ ಮಾಡಬೇಕು. ಜನರಿಗೆ ಸತ್ಯ ತಿಳಿಸಬೇಕು ಎಂದರು.

ನೆಹರೂ 11 ವರ್ಷ ಜೈಲಿಗೆ ಹೋಗಿದ್ದರು. ಆದರೆ ಬಿಜೆಪಿ ನಾಯಕರು ಜೈಲಿಗೆ ಹೋಗಿದ್ದಾರಾ? ಎಂದು ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬೈಂದೂರು: ಬಾಲಕಿ ನೀರುಪಾಲು : ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ..

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago