ದಾವಣಗೆರೆ: ಈಗ ಮೋದಿ ಇದ್ದಾರೆ ಮುಂದೆ ಯೋಗಿ ಬರ್ತಾರೆ. ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ಸಿಎಂ ಆದ್ರೆ ಜೆಸಿಬಿ ಸಹಿತ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಡಿ ಗ್ರಾಮದ ಧರ್ಮ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಈ ಹಿಂದೆ ಪಕ್ಷದಿಂದ ಉಚ್ಚಾಟನೆ ಆದಾಗ ಅಮಿತ್ ಶಾ ಮರಳಿ ಬಿಜೆಪಿ ಕರೆತಂದಿದ್ದರು. ಯಡಿಯೂರಪ್ಪ ಅಲ್ಲ ನನ್ನ ಹಿರಿತನ ನೋಡಿದ್ರೆ ನಾನೇ ಸಿಎಂ ಆಗಬೇಕು. ಆದ್ರೆ ನನಗೆ ಮಂತ್ರಿ ಸಹ ಮಾಡಲಿಲ್ಲ ಯಡಿಯೂರಪ್ಪ. ಆವಾಗಿಂದನೇ ತುಳಿಯುತ್ತಾ ಬಂದಿದ್ದಾರೆ, ಕೊನೆಗೆ ಮದ್ದೂರಿನಿಂದ ಎದ್ದೇ. ರಾಜ್ಯದಲ್ಲಿ ಪಕ್ಷದಿಂದ ಉಚ್ಚಾಟನೆ ಆದವರೆಲ್ಲಾ ಸಿಎಂ ಆಗಿದ್ದಾರೆ. ನಾನು ಯಾಕೆ ಆಗಬಾರದು ಅಂತ ಪ್ರಶ್ನಿಸಿದರು.
ರಾಜ್ಯದಲ್ಲಿ ಡಿಜೆ ಪರವಾನಿಗೆಯಿಲ್ಲ. ಆದ್ರೆ ನಮ್ಮ ವಿಜಯಪುರದಲ್ಲಿ ಮಾತ್ರ ಡಿಜೆ ಪರವಾನಿಗೆ ಇದೆ. ನಾಳೆ ನಾನು ಸಿಎಂ ಆಗುವಾಗ ಜೆಸಿಬಿ ಸಹಿತ ಪ್ರಮಾಣ ವಚನ ಸ್ವೀಕರಿಸುವೆ. ಗಣೇಶ ಮೆರವಣಿಗೆಯಲ್ಲಿ ಜೆಸಿಬಿಯನ್ನೇ ಮುಂದೆ ಬಿಡುತ್ತೇನೆ. ಈಗ ಮೋದಿ ಇದ್ದಾರೆ ಮುಂದೆ ಯೋಗಿ ಬರಲಿದ್ದಾರೆ. ಮೋದಿಗಿಂತ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಸ್ಲಿಂ ಓಲೈಕೆ ಮಾಡುತ್ತಾರೆ. ಇದಕ್ಕೆ ಸುಧಾರಿಸಿಕೊಳ್ಳಬೇಕು ಅಂದ್ರೆ 2028ರ ವರೆಗೆ ಸಿಎಂ ಆಗಿ ಉಳಿತೀರಿ. ಇಲ್ಲಾದ್ರೆ ಇಷ್ಟರಲ್ಲಿ ಸರ್ಕಾರ ಪತನವಾಗುತ್ತೆ. ಆದ್ರೆ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ಗೆ ಸಿಎಂ ಆಗೋಕೆ ಬಿಡಲ್ಲ. ಹಿಂದೂಗಳು ಜನಸಂಖ್ಯೆ ಹೆಚ್ಚಾಗಬೇಕು. ನಾನು ಸಿಎಂ ಆದ್ರೆ 3ನೇ ಮಕ್ಕಳಾದ್ರೆ ಎಲ್ಲಾ ಉಚಿತ ಸೌಲಭ್ಯ. ಮದ್ವೆಗೆ 5 ಲಕ್ಷ ರೂಪಾಯಿ ಸಹ ಉಚಿತ ಕೊಡುವೆ. ಸಾಬರು 25 ಅಡಿತಾರೆ ನಾವು ಕಟ್ಟಿದ ತೆರಿಗೆಯನ್ನೇ ಅವರೇ ತಿಂದು ತೇಗುತ್ತಾರೆ ಅಂತ ಲೇವಡಿ ಮಾಡಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…