Featured

ಈಗ ಮೋದಿ ಇದ್ದಾರೆ , ಮುಂದೆ ಯೋಗಿ ಬರ್ತಾರೆ ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ : ಯತ್ನಾಳ್‌ – vishwanews24

ನಾನು ಸಿಎಂ ಆದ್ರೆ ಜೆಸಿಬಿ ಸಹಿತ ಪ್ರಮಾಣ ವಚನ ಸ್ವೀಕರಿಸುವೆ : ಬಸನಗೌಡ ಪಾಟೀಲ್ ಯತ್ನಾಳ್

ದಾವಣಗೆರೆ: ಈಗ ಮೋದಿ ಇದ್ದಾರೆ ಮುಂದೆ ಯೋಗಿ ಬರ್ತಾರೆ. ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ಸಿಎಂ ಆದ್ರೆ ಜೆಸಿಬಿ ಸಹಿತ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಡಿ ಗ್ರಾಮದ ಧರ್ಮ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಈ ಹಿಂದೆ ಪಕ್ಷದಿಂದ ಉಚ್ಚಾಟನೆ ಆದಾಗ ಅಮಿತ್ ಶಾ ಮರಳಿ ಬಿಜೆಪಿ ಕರೆತಂದಿದ್ದರು. ಯಡಿಯೂರಪ್ಪ ಅಲ್ಲ ನನ್ನ ಹಿರಿತನ ನೋಡಿದ್ರೆ ನಾನೇ ಸಿಎಂ ಆಗಬೇಕು. ಆದ್ರೆ ನನಗೆ ಮಂತ್ರಿ ಸಹ ಮಾಡಲಿಲ್ಲ ಯಡಿಯೂರಪ್ಪ. ಆವಾಗಿಂದನೇ ತುಳಿಯುತ್ತಾ ಬಂದಿದ್ದಾರೆ, ಕೊನೆಗೆ ಮದ್ದೂರಿನಿಂದ ಎದ್ದೇ. ರಾಜ್ಯದಲ್ಲಿ ಪಕ್ಷದಿಂದ ಉಚ್ಚಾಟನೆ ಆದವರೆಲ್ಲಾ ಸಿಎಂ ಆಗಿದ್ದಾರೆ. ನಾನು ಯಾಕೆ ಆಗಬಾರದು ಅಂತ ಪ್ರಶ್ನಿಸಿದರು.

ರಾಜ್ಯದಲ್ಲಿ ಡಿಜೆ ಪರವಾನಿಗೆಯಿಲ್ಲ. ಆದ್ರೆ ನಮ್ಮ ವಿಜಯಪುರದಲ್ಲಿ ಮಾತ್ರ ಡಿಜೆ ಪರವಾನಿಗೆ ಇದೆ. ನಾಳೆ ನಾನು ಸಿಎಂ ಆಗುವಾಗ ಜೆಸಿಬಿ ಸಹಿತ ಪ್ರಮಾಣ ವಚನ ಸ್ವೀಕರಿಸುವೆ. ಗಣೇಶ ಮೆರವಣಿಗೆಯಲ್ಲಿ ಜೆಸಿಬಿಯನ್ನೇ ಮುಂದೆ ಬಿಡುತ್ತೇನೆ. ಈಗ ಮೋದಿ ಇದ್ದಾರೆ ಮುಂದೆ ಯೋಗಿ ಬರಲಿದ್ದಾರೆ. ಮೋದಿಗಿಂತ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಸ್ಲಿಂ ಓಲೈಕೆ ಮಾಡುತ್ತಾರೆ. ಇದಕ್ಕೆ ಸುಧಾರಿಸಿಕೊಳ್ಳಬೇಕು ಅಂದ್ರೆ 2028ರ ವರೆಗೆ ಸಿಎಂ ಆಗಿ ಉಳಿತೀರಿ. ಇಲ್ಲಾದ್ರೆ ಇಷ್ಟರಲ್ಲಿ ಸರ್ಕಾರ ಪತನವಾಗುತ್ತೆ. ಆದ್ರೆ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್‌ಗೆ ಸಿಎಂ ಆಗೋಕೆ ಬಿಡಲ್ಲ. ಹಿಂದೂಗಳು ಜನಸಂಖ್ಯೆ ಹೆಚ್ಚಾಗಬೇಕು. ನಾನು ಸಿಎಂ ಆದ್ರೆ 3ನೇ ಮಕ್ಕಳಾದ್ರೆ ಎಲ್ಲಾ ಉಚಿತ ಸೌಲಭ್ಯ. ಮದ್ವೆಗೆ 5 ಲಕ್ಷ ರೂಪಾಯಿ ಸಹ ಉಚಿತ ಕೊಡುವೆ. ಸಾಬರು 25 ಅಡಿತಾರೆ ನಾವು ಕಟ್ಟಿದ ತೆರಿಗೆಯನ್ನೇ ಅವರೇ ತಿಂದು ತೇಗುತ್ತಾರೆ ಅಂತ ಲೇವಡಿ ಮಾಡಿದರು.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago