ಬೆಂಗಳೂರು: ರಾಜ್ಯ ಸರ್ಕಾರ ಇತಿಹಾಸದಿಂದ ಪಾಠ ಕಲಿಯಬೇಕಿತ್ತು. ದುರಂತವೆಂದರೆ ಈಗ ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಇತಿಹಾಸದಿಂದ ಪಾಠ ಕಲಿಯಬೇಕಿತ್ತು. ಕೇವಲ 1 ವರ್ಷದ ಹಿಂದೆ ಮಳೆ ಮಾಡಿದ ಅನಾಹುತ ಸರ್ಕಾರ ನಡೆಸುವವರ ಗಮನದಲ್ಲಿರಬೇಕಿತ್ತು. ಆದರೆ ರಾಜ್ಯದ ಜನರ ದುರಾದೃಷ್ಟ,ಕೊರೊನಾ ಕಂಟಕದ ಮಧ್ಯೆಯೆ ಪ್ರವಾಹ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ. ದುರಂತವೆಂದರೆ ಈಗ ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು!! ಎಂದಿದ್ದಾರೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೊಡಗು ಸೇರಿದಂತೆ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಪ್ರವಾಹ ಉಂಟಾಗಿದೆ. ಅಲ್ಲದೇ, ಭಾರೀ ಮಳೆಯ ಪರಿಣಾಮ ಗುಡ್ಡಗಳು ಕುಸಿದಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಕೊರೊನಾದ ನಡುವೆ ಪ್ರವಾಹ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ. ರಾಜ್ಯ ಸರ್ಕಾರವು ಪ್ರಸ್ತುತ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…