ಕಾಪು : ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈಚರ್ ಟೆಂಪೊ ಮತ್ತು ಟ್ಯಾಂಕರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಟ್ಯಾಂಕರ್ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಈಚರ್ ಟೆಂಪೊಗೆ ಹಿಂದಿನಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಈಚರ್ ಹೆದ್ದಾರಿಯ ಡಿವೈಡರ್ ಉರುಳಿ ಬಿತ್ತೆನ್ನಲಾಗಿದೆ. ಅಪಘಾತದ ತೀವ್ರತೆಗೆ ಟ್ಯಾಂಕರ್ನ ಮುಂಭಾಗ ಜಖಂಗೊಂಡಿದ್ದು, ಚಾಲಕನ ಕಾಲು ಸಿಲುಕಿಕೊಂಡಿತ್ತು. ಸ್ಥಳೀಯರು ಚಾಲಕನನ್ನು ರಕ್ಷಿಸಲು ಹರಸಾಹಸಪಟ್ಟರು.
ಅದೇ ರೀತಿ ಈಚರ್ನಲ್ಲಿದ್ದವರಿಗೆ ಗಾಯಗಳಾಗಿರುವ ಬಗ್ಗೆ ತಿಳಿದುಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿದ್ದು, ಕ್ರೇನ್ ಮೂಲಕ ಅಪಘಾತಕ್ಕೀಡಾದ ವಾಹನ ಗಳನ್ನು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ವಾಹನ ಸಂಚಾರದಲ್ಲ ವ್ಯತ್ಯಯ ಉಂಟಾಗಿದ್ದು, ಇನ್ನಷ್ಟೆ ಹೆಚ್ಚಿನ ಮಾಹಿತಿ ಗಳು ತಿಳಿದು ಬರಬೇಕಾಗಿವೆ.
ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…
ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…