Featured

ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು ಮಂಜೂರು: ಸಿಎಂ ಬೊಮ್ಮಾಯಿ – Vishwanews24

ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು ಮಂಜೂರು: ಸಿಎಂ ಬೊಮ್ಮಾಯಿ

ಬೆಂಗಳೂರು : ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನನ್ನು ಮಂಜೂರು ಮಾಡಿ ಶೀಘ್ರವಾಗಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ವೈಯಾಲಿಕಾವಲ್ ನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಮುದಾಯ ಭವನಕ್ಕೆ ಎರಡು ಕಂತುಗಳಲ್ಲಿ 5 ಕೋಟಿ‌ ರೂ ಒದಗಿಸಿ, 4 ನಾರಾಯಣ ಗುರುಗಳ ವಸತಿ ಶಾಲೆಗೆ 30 ರಿಂದ 40 ಕೋಟಿ ರೂ. ಒದಗಿಸಲಾಗುವುದು. ಸಮಾಜದ ಬಡ ಮಕ್ಕಳಿಗೆ ನೀಡುವ ಕಾರ್ಯ ಇದೇ ವರ್ಷ ಆರಂಭವಾಗುತ್ತದೆ ಎಂದು ಹೇಳಿದರು.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನಾರಾಯಣ ಗುರುಗಳ ವಿಚಾರಧಾರೆ ಸರ್ವ ಕಾಲಕ್ಕೂ ಅವಶ್ಯಕ. ಅತ್ಯಂತ ಮಾನವೀಯ ತಳಹದಿಯ ಮೇಲೆ ಬದುಕನ್ನು ಯಾವ ರೀತಿ ನಡೆಸಬೇಕು ಎನ್ನುವುದನ್ನು ಮಾರ್ಮಿಕವಾಗಿ ಬದುಕಿ ತೋರಿಸಿದವರು. ಈ ದೇಶ-ವಿಶ್ವದಲ್ಲಿ ‌ನಾವು ಹಲವಾರು ಧರ್ಮ,‌ ಜಾತಿಗಳನ್ನು ನೋಡಿದ್ದೇವೆ.‌ ಎಲ್ಲ ಧರ್ಮ ಜಾತಿಗಳು ಮಾನವೀಯ ಗುಣಗಳನ್ನು ಒಳಗೊಂಡಿವೆ. ನಮ್ಮಲ್ಲಿ ಸುಖ, ಶಾಂತಿ, ನೆಮ್ಮದಿ, ವಿಶ್ವಾಸ, ದಯೆಯಿಂದ ತುಂಬಿರಬೇಕು ಎನ್ನುವುದು ಮಾನವೀಯ ಗುಣ. ಮನುಷ್ಯ ಮತ್ತು ಮಾನವನ ನಡುವೆ ವ್ಯತ್ಯಾಸವಿದೆ. ಕೆಲವೇ ಕೆಲವರು ಮಾನವರಾಗಿ, ಇನ್ನೂ ಕೆಲವರು ಅತ್ಯಂತ ಯುಗಪುರುಷರಾಗಿ ದೇವ ಮಾನವರಾಗುತ್ತಾರೆ. ಅಂತಹ ದೇವ ಮಾನವರಾಗಿರುವವರು ನಾರಾಯಣ ಗುರುಗಳು ಎಂದು ಸಿಎಂ ತಿಳಿಸಿದರು.

ಸರ್ವಕಾಲಿಕ ಸತ್ಯ ಮಾರ್ಗದಲ್ಲಿ ನಡೆಯುವವನೇ ದೇವ ಮಾನವ. ಅವರ ಬದುಕಿನ ಸಾವಿರಾರು ಹೆಜ್ಜೆಗಳಲ್ಲಿ ನಾವು ಎರಡು ಹೆಜ್ಜೆ ನಡೆದರೆ ನಮ್ಮ ಜೀವನ ಸಾರ್ಥಕ‌ ಆಗುತ್ತದೆ. ಬದಲಾವಣೆ ಜಗದ ನಿಯಮ. ಆದರೆ ಬದಲಾವಣೆ ಆರಂಭದಲ್ಲಿಯೇ ಆಗುವುದಿಲ್ಲ. ಆಚಾರ ವಿಚಾರದಲ್ಲಿ ಬದಲಾವಣೆ ಸುಲಭವಾಗಿ ಆಗುವುದಿಲ್ಲ. ಅದಕ್ಕೆ ಗುರುವಿನ ಅವಶ್ಯಕತೆಯಿದೆ. ಗುರುವಿನ ಮಾರ್ಗದರ್ಶನ, ಸ್ಪೂರ್ತಿಯಿಂದ ನಾವು ನಮ್ಮ ಬದುಕಿನ ಗುರಿಯನ್ನು ಮುಟ್ಟಬಹುದಾಗಿದೆ. ನಮ್ಮ ದೇಶಕ್ಕೆ‌ ಹಿಂದಿನಗಿಂತಲೂ ಈಗ ನಾರಾಯಣ ಗುರುಗಳ ಅವಶ್ಯಕತೆ ಹೆಚ್ಚಿದೆ ಎಂದು ತಿಳಿಸಿದರು.

ಮಂಗಳೂರು; ಫಾಝಿಲ್ ಹತ್ಯೆ ಪ್ರಕರಣದಲ್ಲಿ‌ ಸರ್ಕಾರದ ತಾರತಮ್ಯ ಆರೋಪ..ಇಂದು ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ – Vishwanews24

ಸಮಾಜದಲ್ಲಿ ಜಾಗೃತಿಯ ಜೊತೆಗೆ ಒಗ್ಗಟ್ಟು ಬಹಳ ಮುಖ್ಯ. ಬೇರೆ ಬೇರೆ 26 ಕಸುಬುಗಳಲ್ಲಿ ಕೆಲಸ ಮಾಡಿಕೊಂಡರು, ಅವರನ್ನು ಒಗ್ಗೂಡಿಸಿದ್ದು ನಾರಾಯಣ ಗುರುಗಳು. ಇದನ್ನು ಕಾಪಾಡಿಕೊಂಡು ಹೋಗಬೇಕು. ಪ್ರಜಾಪ್ರಭುತ್ವದಲ್ಲಿ ಸಂಘಟಿತವಾದ ಧ್ವನಿಗೆ ಬಹಳ ಬೆಲೆಯಿದೆ. ಈ ವ್ಯವಸ್ಥೆಯಲ್ಲಿ ನಮ್ಮ ಬದುಕು, ನಮ್ಮ ಮಕ್ಕಳ ಭವಿಷ್ಯ ಚೆನ್ನಾಗಿ ಆಗಬೇಕಾದರೆ, ಈ ಸಮಾಜ ಸಂಘಟಿತವಾಗಿ ಎದ್ದು ನಿಲ್ಲಬೇಕು ಎಂದು ಕರೆ ನೀಡಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

8 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

8 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

9 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

9 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

13 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

13 hours ago