Featured

ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು ಮಂಜೂರು: ಸಿಎಂ ಬೊಮ್ಮಾಯಿ – Vishwanews24

ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು ಮಂಜೂರು: ಸಿಎಂ ಬೊಮ್ಮಾಯಿ

ಬೆಂಗಳೂರು : ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನನ್ನು ಮಂಜೂರು ಮಾಡಿ ಶೀಘ್ರವಾಗಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ವೈಯಾಲಿಕಾವಲ್ ನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಮುದಾಯ ಭವನಕ್ಕೆ ಎರಡು ಕಂತುಗಳಲ್ಲಿ 5 ಕೋಟಿ‌ ರೂ ಒದಗಿಸಿ, 4 ನಾರಾಯಣ ಗುರುಗಳ ವಸತಿ ಶಾಲೆಗೆ 30 ರಿಂದ 40 ಕೋಟಿ ರೂ. ಒದಗಿಸಲಾಗುವುದು. ಸಮಾಜದ ಬಡ ಮಕ್ಕಳಿಗೆ ನೀಡುವ ಕಾರ್ಯ ಇದೇ ವರ್ಷ ಆರಂಭವಾಗುತ್ತದೆ ಎಂದು ಹೇಳಿದರು.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನಾರಾಯಣ ಗುರುಗಳ ವಿಚಾರಧಾರೆ ಸರ್ವ ಕಾಲಕ್ಕೂ ಅವಶ್ಯಕ. ಅತ್ಯಂತ ಮಾನವೀಯ ತಳಹದಿಯ ಮೇಲೆ ಬದುಕನ್ನು ಯಾವ ರೀತಿ ನಡೆಸಬೇಕು ಎನ್ನುವುದನ್ನು ಮಾರ್ಮಿಕವಾಗಿ ಬದುಕಿ ತೋರಿಸಿದವರು. ಈ ದೇಶ-ವಿಶ್ವದಲ್ಲಿ ‌ನಾವು ಹಲವಾರು ಧರ್ಮ,‌ ಜಾತಿಗಳನ್ನು ನೋಡಿದ್ದೇವೆ.‌ ಎಲ್ಲ ಧರ್ಮ ಜಾತಿಗಳು ಮಾನವೀಯ ಗುಣಗಳನ್ನು ಒಳಗೊಂಡಿವೆ. ನಮ್ಮಲ್ಲಿ ಸುಖ, ಶಾಂತಿ, ನೆಮ್ಮದಿ, ವಿಶ್ವಾಸ, ದಯೆಯಿಂದ ತುಂಬಿರಬೇಕು ಎನ್ನುವುದು ಮಾನವೀಯ ಗುಣ. ಮನುಷ್ಯ ಮತ್ತು ಮಾನವನ ನಡುವೆ ವ್ಯತ್ಯಾಸವಿದೆ. ಕೆಲವೇ ಕೆಲವರು ಮಾನವರಾಗಿ, ಇನ್ನೂ ಕೆಲವರು ಅತ್ಯಂತ ಯುಗಪುರುಷರಾಗಿ ದೇವ ಮಾನವರಾಗುತ್ತಾರೆ. ಅಂತಹ ದೇವ ಮಾನವರಾಗಿರುವವರು ನಾರಾಯಣ ಗುರುಗಳು ಎಂದು ಸಿಎಂ ತಿಳಿಸಿದರು.

ಸರ್ವಕಾಲಿಕ ಸತ್ಯ ಮಾರ್ಗದಲ್ಲಿ ನಡೆಯುವವನೇ ದೇವ ಮಾನವ. ಅವರ ಬದುಕಿನ ಸಾವಿರಾರು ಹೆಜ್ಜೆಗಳಲ್ಲಿ ನಾವು ಎರಡು ಹೆಜ್ಜೆ ನಡೆದರೆ ನಮ್ಮ ಜೀವನ ಸಾರ್ಥಕ‌ ಆಗುತ್ತದೆ. ಬದಲಾವಣೆ ಜಗದ ನಿಯಮ. ಆದರೆ ಬದಲಾವಣೆ ಆರಂಭದಲ್ಲಿಯೇ ಆಗುವುದಿಲ್ಲ. ಆಚಾರ ವಿಚಾರದಲ್ಲಿ ಬದಲಾವಣೆ ಸುಲಭವಾಗಿ ಆಗುವುದಿಲ್ಲ. ಅದಕ್ಕೆ ಗುರುವಿನ ಅವಶ್ಯಕತೆಯಿದೆ. ಗುರುವಿನ ಮಾರ್ಗದರ್ಶನ, ಸ್ಪೂರ್ತಿಯಿಂದ ನಾವು ನಮ್ಮ ಬದುಕಿನ ಗುರಿಯನ್ನು ಮುಟ್ಟಬಹುದಾಗಿದೆ. ನಮ್ಮ ದೇಶಕ್ಕೆ‌ ಹಿಂದಿನಗಿಂತಲೂ ಈಗ ನಾರಾಯಣ ಗುರುಗಳ ಅವಶ್ಯಕತೆ ಹೆಚ್ಚಿದೆ ಎಂದು ತಿಳಿಸಿದರು.

ಮಂಗಳೂರು; ಫಾಝಿಲ್ ಹತ್ಯೆ ಪ್ರಕರಣದಲ್ಲಿ‌ ಸರ್ಕಾರದ ತಾರತಮ್ಯ ಆರೋಪ..ಇಂದು ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ – Vishwanews24

ಸಮಾಜದಲ್ಲಿ ಜಾಗೃತಿಯ ಜೊತೆಗೆ ಒಗ್ಗಟ್ಟು ಬಹಳ ಮುಖ್ಯ. ಬೇರೆ ಬೇರೆ 26 ಕಸುಬುಗಳಲ್ಲಿ ಕೆಲಸ ಮಾಡಿಕೊಂಡರು, ಅವರನ್ನು ಒಗ್ಗೂಡಿಸಿದ್ದು ನಾರಾಯಣ ಗುರುಗಳು. ಇದನ್ನು ಕಾಪಾಡಿಕೊಂಡು ಹೋಗಬೇಕು. ಪ್ರಜಾಪ್ರಭುತ್ವದಲ್ಲಿ ಸಂಘಟಿತವಾದ ಧ್ವನಿಗೆ ಬಹಳ ಬೆಲೆಯಿದೆ. ಈ ವ್ಯವಸ್ಥೆಯಲ್ಲಿ ನಮ್ಮ ಬದುಕು, ನಮ್ಮ ಮಕ್ಕಳ ಭವಿಷ್ಯ ಚೆನ್ನಾಗಿ ಆಗಬೇಕಾದರೆ, ಈ ಸಮಾಜ ಸಂಘಟಿತವಾಗಿ ಎದ್ದು ನಿಲ್ಲಬೇಕು ಎಂದು ಕರೆ ನೀಡಿದರು.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

11 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

13 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

13 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

13 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

13 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

13 hours ago