ಕಾಪು : ಈದುಲ್ ಫಿತ್ರ್ ಹಬ್ಬದ ನಮಾಜ್ ನಿರ್ವಹಿಸಿ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾಪು ತಂಡವು ಕಾಪು ತಾಲೂಕು ಅಧ್ಯಕ್ಷ ಜನಾಬ್ ಶಬೀಹ್ ಅಹಮದ್ ಕಾಝೀ ಯವರ ನೇತೃತ್ವದಲ್ಲಿ ಕಾಪುವಿನ ವ್ರತ್ತ ನಿರೀಕ್ಷಕ ಕಚೇರಿಯಿಂದ ಕಾಪು ಪೊಲೀಸ್ ಠಾಣೆ ತನಕದ ಹಿಂದೂ ಸಹೋದರರ ವ್ಯಾಪಾರ ಮಳಿಗೆಗಳಿಗೆ ಭೇಟಿ ನೀಡಿ ಸೌಹಾರ್ದತೆಯ ಸಂದೇಶದೊಂದಿಗೆ ಸಿಹಿ ತಿಂಡಿಯನ್ನು ಹಂಚಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ವ್ರತ್ತ ನಿರೀಕ್ಷಕ ಅಧಿಕಾರಿ ಪ್ರಕಾಶ್ ರವರು ಹಾಗೂ ಠಾಣಾಧಿಕಾರಿ ರಾಘವೇಂದ್ರರವರು ಇಂತಹ ಕಾರ್ಯಕ್ರಮದಿಂದ ಸಮಾಜದಲ್ಲಿ ಪ್ರೀತಿ, ಪ್ರೇಮ, ಸಹೋದರತ್ವ ಗಟ್ಟಿಗೊಳ್ಳುತ್ತದೆ ಎಂದರು. ಹಿಂದೂ, ಮುಸ್ಲಿಮರು ಈ ದೇಶದಲ್ಲಿ ಹಿಂದಿನಿಂದಲೂ ಅನೋನ್ಯತೆಯಿಂದ ಇದ್ದು, ಮುಂದಿನ ದಿನಗಳಲ್ಲೂ ನಮ್ಮ, ನಿಮ್ಮ ಸಂಬಂಧ ಹೀಗೆಯೇ ಇರಲಿ ಎಂದು ಉದ್ಯಮಿ ಹರೀಶ್ ನಾಯಕ್ ರವರು ಹೇಳಿದರು. ಒಕ್ಕೂಟದ ಈ ಕಾರ್ಯಕ್ರಮವು ಜನರಲ್ಲಿ ತುಂಬಾ ಪ್ರಭಾವ ಬೀರಿದ್ದು, ತಂಡದಲ್ಲಿ ಜಿಲ್ಲಾ ಉಪಾಧ್ಯಕ್ಷ ಅನ್ವರ್ ಅಲಿ ಕಾಪು, ಪದಾಧಿಕಾರಿಗಳದ ಮುಹಮ್ಮದ್ ಇಕ್ಬಾಲ್ ಸಾಹೇಬ್ ಮಜೂರು, ನಸೀರ್ ಅಹಮದ್, ಮುಸ್ತಾಕ್ ಇಬ್ರಾಹೀಮ್ ಉಪಸ್ಥಿತರಿದ್ದರು.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…