Featured

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ: ಜಮೀರ್ ಅಹ್ಮದ್ – Vishwanews24

ಸ್ವಾತಂತ್ರ್ಯೋತ್ಸವ ಗಣರಾಜ್ಯೋತ್ಸವ ವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ..

ಯಾವುದೇ ಧಾರ್ಮಿಕ ಹಬ್ಬಗಳಿಗೆ ಇಲ್ಲಿ ಅವಕಾಶವಿಲ್ಲ..

ಬೆಂಗಳೂರು: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಇಲ್ಲಿ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದರು.

ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಆಸ್ತಿ ಎಂಬ ಆದೇಶ ಬೆನ್ನಲ್ಲೇ ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಜೊತೆಗೆ ಶಾಂತಿ ಸೌಹಾರ್ದತೆ ಕಾಪಾಡಲು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೈದಾನಕ್ಕೆ ಶಾಸಕ ಜಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಮೈದಾನದಲ್ಲಿ ಹೇಗೆ ಆಚರಣೆ ಮಾಡ್ಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲು ಬಂದಿದ್ದೇನೆ. 75ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇನ್ಮುಂದೆ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಇಲ್ಲಿ ನಡೆಯುತ್ತದೆ. ಆದರೆ ಯಾವುದೇ ಧಾರ್ಮಿಕ ಹಬ್ಬಗಳಿಗೆ ಇಲ್ಲಿ ಅವಕಾಶವಿಲ್ಲ. ಎಷ್ಟು ಜನ ಬೇಕಾದ್ರೂ ಸೇರಲಿ ಜತೆಯಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಉಪ್ಪಿನಂಗಡಿ – ತುಳು ಭಾಷೆ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – Vishwanews24

ಇತ್ತೀಚೆಗಷ್ಟೇ ಈದ್ಗಾ ವಿವಾದದ ಬಗ್ಗೆ ವರ್ಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಬಿಬಿಎಂಪಿ ವಜಾ ಮಾಡಿದ್ದು, ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದರು.

ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಅವರು, ಈ ಹಿಂದೆ ಚಾಮರಾಜಪೇಟೆ ಆಟದ ಮೈದಾನವನ್ನು ವರ್ಕ್ಫ್ ಬೋರ್ಡ್ ಹೆಸರಿಗೆ ಖಾತೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಅರ್ಜಿಯನ್ನು ವಜಾಗೊಳಿಸಿದ್ದು, ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಆಸ್ತಿಯೆಂದು ನಮೂದಿಸಲು ಸೂಚನೆ ನೀಡಿತ್ತು. ವರ್ಕ್ಫ್ ಬೋರ್ಡ್ ಆಸ್ತಿಯ ಬಗ್ಗೆ ಹಕ್ಕು ಸ್ಥಾಪಿಸಬೇಕಿದ್ದಲ್ಲಿ ಕಂದಾಯ ಇಲಾಖೆ ಬಳಿ ವ್ಯವಹರಿಸಬೇಕು ಎಂದು ತಿಳಿಸಿದ್ದರು.

ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ : ಸಿದ್ದರಾಮಯ್ಯ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago