Featured

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಿರಿ: ಜಮೀರ್‌ಗೆ  ಶ್ರೀರಾಮ ಸೇನೆ ಸವಾಲ್‌ – Vishwanews24

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುತ್ತೇವೆ, ತಾಕತ್ತಿದ್ದರೆ  ತಡೆಯಿರಿ: ಜಮೀರ್‌ಗೆ 

ಶ್ರೀರಾಮ ಸೇನೆ ಸವಾಲ್‌

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್‌ ವಿರುದ್ಧ ಹಿಂದೂ ಸಂಘಟನೆಗಳು ಕಿಡಿಕಾರಿದ್ದು ನಾವು ಗಣೇಶೋತ್ಸವ ಆಚರಿಸುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಸವಾಲು ಹಾಕಿವೆ.

ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್‌, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಹೇಳಿದ್ದರು.

ಜಮೀರ್‌ ಅವರಿಂದ ಈ ಹೇಳಿಕೆ ಪ್ರಕಟವಾದ ಬೆನ್ನಲ್ಲೇ ಶ್ರೀರಾಮ ಸೇನೆ, ಅದು ಈದ್ಗಾ ಮೈದಾನವಲ್ಲ. ಅಲ್ಲಿರುವುದು ಬಿಬಿಎಂಪಿ ಆಟದ ಮೈದಾನ. ಗಣೇಶೋತ್ಸವವನ್ನು ಅಲ್ಲೇ ಮಾಡುತ್ತೇವೆ. ತಾಕತ್ತಿದ್ದರೆ ತಡೀರಿ ಎಂದು ಪೋಸ್ಟರ್‌ ಹಾಕಿದೆ. ಜಮೀರ್‌ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈಗ ಈ ವಿಚಾರದ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.

ಪ್ರಸ್ತುತ ಈದ್ಗಾ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ. ಮುಸ್ಲಿಂ ಸಮುದಾಯದ ರಂಜಾನ್, ಬಕ್ರೀದ್‌ ಆಚರಣೆ ಹೊರತುಪಡಿಸಿ ಯಾವುದೇ ಧಾರ್ಮಿಕ ಆಚರಣೆಗಳಿಗೂ ಪೊಲೀಸರಿಂದ ಅವಕಾಶವಿಲ್ಲ. ಆರ್‌ಎಸ್‍ಎಸ್ ಪಥ ಸಂಚಲನ, ಧಾರ್ಮಿಕ ಆಚರಣೆಗಳು, ಇತರೆ ಕಾರ್ಯಕ್ರಮ ಮಾಡಲು ಮುಂದಾದಾಗ ಪೊಲೀಸರು ಅವಕಾಶ ಕೊಟ್ಟಿರಲಿಲ್ಲ.

ಉಡುಪಿ ಜಿಲ್ಲಾ ರಜತ ಮಹೋತ್ಸವ ; ಸಾರ್ವಜನಿಕರಿಂದ ಲಾಂಛನ ವಿನ್ಯಾಸಕ್ಕಾಗಿ ಕರೆ – Vishwanews24

ಈದ್ಗಾ ಮೈದಾನ ಯಾರ ಆಸ್ತಿ ಎಂಬ ವಿಚಾರದ ಚರ್ಚೆ ಮುನ್ನೆಲೆಗೆ ಬಂದ ಬೆನ್ನಲ್ಲೇ ಕಳೆದ ತಿಂಗಳು ಬಿಬಿಎಂಪಿ ಈದ್ಗಾ ಮೈದಾನ ನಿಮ್ಮ ಆಸ್ತಿ ಎಂದು ಸಾಬೀತು ಪಡಿಸಲು ದಾಖಲೆ ನೀಡುವಂತೆ ವಕ್ಫ್‌ ಬೋರ್ಡ್‌ಗೆ ಸೂಚಿಸಿತ್ತು. ಆದರೆ ವಕ್ಫ್‌ ಬೋರ್ಡ್‌ ಕಡೆಯಿಂದ ಸರಿಯಾದ ದಾಖಲೆಗಳು ಸಲ್ಲಿಕೆಯಾಗಿರಲಿಲ್ಲ. ಹೀಗಾಗಿ ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದರು.

ಬಿಬಿಎಂಪಿಯಿ ಈ ಮಹತ್ವದ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಮುಸ್ಲಿಮರಿಗೆ ಮಾತ್ರ ಪ್ರಾರ್ಥನೆಗೆ ಅವಕಾಶ ಯಾಕೆ ಈ ಜಾಗದಲ್ಲಿ ಅವಕಾಶ ಹಿಂದೂಗಳಿಗೆ ಕೊಡಿ, ನಾವು ಗಣೇಶೋತ್ಸವ ಆಚರಿಸುತ್ತೇವೆ ಎಂದು ವಾದವನ್ನು ಮುಂದಿಟ್ಟಿವೆ.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago