ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ವಿರುದ್ಧ ಹಿಂದೂ ಸಂಘಟನೆಗಳು ಕಿಡಿಕಾರಿದ್ದು ನಾವು ಗಣೇಶೋತ್ಸವ ಆಚರಿಸುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಸವಾಲು ಹಾಕಿವೆ.
ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಹೇಳಿದ್ದರು.
ಜಮೀರ್ ಅವರಿಂದ ಈ ಹೇಳಿಕೆ ಪ್ರಕಟವಾದ ಬೆನ್ನಲ್ಲೇ ಶ್ರೀರಾಮ ಸೇನೆ, ಅದು ಈದ್ಗಾ ಮೈದಾನವಲ್ಲ. ಅಲ್ಲಿರುವುದು ಬಿಬಿಎಂಪಿ ಆಟದ ಮೈದಾನ. ಗಣೇಶೋತ್ಸವವನ್ನು ಅಲ್ಲೇ ಮಾಡುತ್ತೇವೆ. ತಾಕತ್ತಿದ್ದರೆ ತಡೀರಿ ಎಂದು ಪೋಸ್ಟರ್ ಹಾಕಿದೆ. ಜಮೀರ್ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈಗ ಈ ವಿಚಾರದ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.
ಪ್ರಸ್ತುತ ಈದ್ಗಾ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ. ಮುಸ್ಲಿಂ ಸಮುದಾಯದ ರಂಜಾನ್, ಬಕ್ರೀದ್ ಆಚರಣೆ ಹೊರತುಪಡಿಸಿ ಯಾವುದೇ ಧಾರ್ಮಿಕ ಆಚರಣೆಗಳಿಗೂ ಪೊಲೀಸರಿಂದ ಅವಕಾಶವಿಲ್ಲ. ಆರ್ಎಸ್ಎಸ್ ಪಥ ಸಂಚಲನ, ಧಾರ್ಮಿಕ ಆಚರಣೆಗಳು, ಇತರೆ ಕಾರ್ಯಕ್ರಮ ಮಾಡಲು ಮುಂದಾದಾಗ ಪೊಲೀಸರು ಅವಕಾಶ ಕೊಟ್ಟಿರಲಿಲ್ಲ.
ಉಡುಪಿ ಜಿಲ್ಲಾ ರಜತ ಮಹೋತ್ಸವ ; ಸಾರ್ವಜನಿಕರಿಂದ ಲಾಂಛನ ವಿನ್ಯಾಸಕ್ಕಾಗಿ ಕರೆ – Vishwanews24
ಈದ್ಗಾ ಮೈದಾನ ಯಾರ ಆಸ್ತಿ ಎಂಬ ವಿಚಾರದ ಚರ್ಚೆ ಮುನ್ನೆಲೆಗೆ ಬಂದ ಬೆನ್ನಲ್ಲೇ ಕಳೆದ ತಿಂಗಳು ಬಿಬಿಎಂಪಿ ಈದ್ಗಾ ಮೈದಾನ ನಿಮ್ಮ ಆಸ್ತಿ ಎಂದು ಸಾಬೀತು ಪಡಿಸಲು ದಾಖಲೆ ನೀಡುವಂತೆ ವಕ್ಫ್ ಬೋರ್ಡ್ಗೆ ಸೂಚಿಸಿತ್ತು. ಆದರೆ ವಕ್ಫ್ ಬೋರ್ಡ್ ಕಡೆಯಿಂದ ಸರಿಯಾದ ದಾಖಲೆಗಳು ಸಲ್ಲಿಕೆಯಾಗಿರಲಿಲ್ಲ. ಹೀಗಾಗಿ ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದರು.
ಬಿಬಿಎಂಪಿಯಿ ಈ ಮಹತ್ವದ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಮುಸ್ಲಿಮರಿಗೆ ಮಾತ್ರ ಪ್ರಾರ್ಥನೆಗೆ ಅವಕಾಶ ಯಾಕೆ ಈ ಜಾಗದಲ್ಲಿ ಅವಕಾಶ ಹಿಂದೂಗಳಿಗೆ ಕೊಡಿ, ನಾವು ಗಣೇಶೋತ್ಸವ ಆಚರಿಸುತ್ತೇವೆ ಎಂದು ವಾದವನ್ನು ಮುಂದಿಟ್ಟಿವೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…