ಬೆಂಗಳೂರು: ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಕಾಶ್, ಪಾರಿಜಾತ ದಂಪತಿ ಪಟ್ಟೆಗಾರಪಾಳ್ಯ ನಿವಾಸಿಗಳು. ಇವರು ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸ್ತಿದ್ರು. ಸದ್ಯ ಇಬ್ಬರನ್ನೂ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳು, ಉದ್ಯೋಗ ಕೊಡಿಸುವ ನೆಪದಲ್ಲಿ ಬಡ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಉತ್ತರ ಕರ್ನಾಟಕ ಭಾಗದ ಬಡ ಹೆಣ್ಣುಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸ್ತಿದ್ರು. ಬಳಿಕ ವೇಶ್ಯಾವಾಟಿಕೆ ಅಡ್ಡೆಗೆ ದೂಡುತ್ತಿದ್ದರು. ಆರೋಪಿ ಪ್ರಕಾಶ್, ಪಾರಿಜಾತ ದಂಪತಿ ಕರ್ನಾಟಕದ ಹೆಣ್ಣುಮಕ್ಕಳನ್ನು ಕರೆದೊಯ್ದು ತಮಿಳುನಾಡು, ಪಾಂಡಿಚೇರಿ ರೆಸಾರ್ಟ್ಗಳಲ್ಲಿ ದಂಧೆ ನಡೆಸ್ತಿದ್ದರು. ಮದುವೆ ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಪ್ರತಿ ವಾರಕ್ಕೊಮ್ಮೆ ಬೆಂಗಳೂರಿನಿಂದ ತಮಿಳುನಾಡಿಗೆ ಕರೆದೊಯ್ದು ದಂಧೆ ನಡೆಸುತ್ತಿದ್ದರು.
ಹೊರ ರಾಜ್ಯದ ಶ್ರೀಮಂತರು, ಉದ್ಯಮಿಗಳು, ರೆಸಾರ್ಟ್ಗಳಿಗೆ ಭೇಟಿ ನೀಡ್ತಿದ್ದವರ ಬಳಿ ಈ ಅಮಾಯಕ ಹೆಣ್ಣುಮಕ್ಕಳನ್ನು ದೂಡುತ್ತಿದ್ದರು. ಅಷ್ಟೇ ಅಲ್ಲದೆ ಐಷಾರಾಮಿ ವೇಶ್ಯಾವಾಟಿಕೆ ಪಾರ್ಟಿಯಲ್ಲಿ ಈ ದಂಪತಿ ಮದ್ಯ ಒದಗಿಸುತ್ತಿದ್ದರು. ಪಾರ್ಟಿಗೆ ಬರುವ ಒಬ್ಬರಿಗೆ ತಲಾ 25,000 ದಿಂದ 50 ಸಾವಿರದವರೆಗೂ ನಿಗದಿ ಮಾಡಲಾಗುತ್ತಿತ್ತು. ಬೆಂಗಳೂರಿನಿಂದ ಯುವತಿಯರನ್ನು ಕರೆದೊಯ್ಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ದಾಳಿ ನಡೆಸಿದ್ದು ಸದ್ಯ ನಾಲ್ವರು ಯುವತಿಯರ ರಕ್ಷಣೆ ಮಾಡಲಾಗಿದೆ. ಹಾಗೂ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…