ಉಡುಪಿ

ಈಶ್ವರ್ ಮಲ್ಪೆ, ರವಿ ಕಟಪಾಡಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರ – Vishwanews24

ಈಶ್ವರ್ ಮಲ್ಪೆ, ರವಿ ಕಟಪಾಡಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರ

ಅಯೋಧ್ಯೆ: ರಾಮರಾಜ್ಯದ ಪರಿಕಲ್ಪನೆಯಲ್ಲಿ ನಿಸ್ಪೃಹವಾಗಿ ದೇಶದ ಒಳಿತಿನ ಕಾಯಕಕ್ಕೆ ತಮ್ಮನ್ನು ಅರ್ಪಿಸಿಕೊಂಡ ಉಡುಪಿಯ ಮತ್ತಿಬ್ಬರು ಸಾಮಾಜಿಕ ಧುರೀಣರಿಗೆ ಮಂಗಳವಾರ ಅಯೋಧ್ಯೆಯಲ್ಲಿ ಮಂಡಲೋತ್ಸವ ಪುರಸ್ಕಾರದೊಂದಿಗೆ ರಾಮನ ಪ್ರಸಾದವಿತ್ತು ಅಭಿನಂದಿಸಲಾಗಿದೆ.

ನದಿ ಸಮುದ್ರಗಳಲ್ಲಿ ನೀರಿನ‌ಸೆಳೆತಕ್ಕೆ ಸಿಲುಕಿ ಪ್ರಾಣೋತ್ಕ್ರಮಣ ಸ್ಥಿತಿಯಲ್ಲಿದ್ದ ಸುಮಾರು ಒಂದು ಸಾವಿರದಕ್ಕೂ ಹೆಚ್ಚು ಜನರನ್ನು ಪ್ರಾಣಾಪಾಯದಿಂದ ಪಾರುಮಾಡಿದ ಜೀವರಕ್ಷಕ ಉಡುಪಿ ಮಲ್ಪೆಯ ಈಶ್ವರ್ ಹಾಗೂ ಶ್ರೀಕೃಷ್ಣಾಷ್ಟಮೀ, ಗಣೇಶಚತುರ್ಥೀ ಮೊದಲಾದ ಪರ್ವಸಂದರ್ಭಗಳಲ್ಲಿ ಆಕರ್ಷಕ ವೇಷ ತೊಟ್ಟು ಉತ್ಸವದ ವೈಭವಕ್ಕೆ ಮೆರುಗುತುಂಬಿ ಅದರಲ್ಲಿ ಸಂಗ್ರಹವಾದ ಸುಮಾರು ಒಂದೂವರೆ ಕೋಟಿಗೂ ಮಿಗಿಲಾದ ಮೊತ್ತವನ್ನು ಬಡಬಗ್ಗರ ಚಿಕಿತ್ಸೆಗೆ ವೆಚ್ಚಮಾಡಿ ದೀನಬಂಧು ರವಿ ಕಟಪಾಡಿಯವರಿಗೆ ಶ್ರೀರಾಮದೇವರಿಗೆ ನಡೆಸಲಾದ ಕಲಶಾಭಿಷೇಕದಲ್ಲಿ ತಲಾ ಒಂದು ಕೆ ಜಿ ತೂಕದ ಹಾಗೂ ತಲಾ 1ಲಕ್ಷ ರೂ ಮೌಲ್ಯದ ರಜತಕಲಶವನ್ನು ಶ್ರೀರಾಮನ ಅನುಗ್ರಹ ಪ್ರಸಾದರೂಪದಲ್ಲಿ ನೀಡಿ ಅಭಿನಂದಿಸಲಾಯಿತು .

ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರದಲ್ಲಿ ಸ್ವತಃ ಮುತುವರ್ಜಿ ವಹಿಸಿ ಈ ಇಬ್ಬರನ್ನು ವಿಮಾನದ ಮೂಲಕ ಶ್ರೀ ಮಠದ ವೆಚ್ಚದಲ್ಲೇ ಅಯೋಧ್ಯೆಗೆ ಕರೆಸಿ ಈ ವಿಶೇಷ ಪುರಸ್ಕಾರ ನೀಡಿದ್ದಾರೆ.

ಅಲ್ಲದೇ ಸಂಜೆ ನಡೆದ ಪಲ್ಲಕ್ಕಿ ಉತ್ಸವದಲ್ಲೂ ಇಬ್ಬರಿಗೂ ಶ್ರೀರಾಮದೇವರ ಪ್ರಸಾದ ನೀಡಿ ಇಬ್ಬರೂ ನಡೆಸಿದ ಲೋಕೋತ್ತರ ಕಾರ್ಯವನ್ನು ಮನಸಾ ಕೊಂಡಾಡಿದರು .

ಈ ಸಂದರ್ಭ ಮಾಜಿ ಶಾಸಕ ಕೆ ರಘುಪತಿ ಭಟ್ , ಶ್ರೀಗಳ ಆಪ್ತರಾದ ವಿಷ್ಣು ಆಚಾರ್ಯ, ಕೃಷ್ಣ ಭಟ್ ಶ್ರೀನಿವಾಸ ಪ್ರಸಾದ್ ಮೈಸೂರು, ವಾಸುದೇವ ಭಟ್ ಪೆರಂಪಳ್ಳಿ, ಮಾಜಿ ನಗರಸಭಾ ಸದಸ್ಯ ಮಹೇಶ್ ಠಾಕೂರ್, ಸುವರ್ಧನ್ ನಾಯಕ್ ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

1 hour ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

1 hour ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

2 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago