Featured

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು

ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು ನಿಭಾಯಿ ಸಲು ಕೊಂಕಣ ರೈಲ್ವೆಯು ನೈರುತ್ಯ ರೈಲ್ವೆಯ ಸಹಯೋಗದೊಂದಿಗೆ ಯಶವಂತಪುರ- ಮಡಗಾಂವ್ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

ರೈಲು ನಂ.06271 ಯಶವಂತಪುರ- ಮಡಗಾಂವ್ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಎಪ್ರಿಲ್ 2ರಂದು ಗುರುವಾರ ಮಧ್ಯರಾತ್ರಿ 11:55ಕ್ಕೆ ಯಶವಂತಪುರ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿದ್ದು, ಮರುದಿನ (ಶುಕ್ರವಾರ) ಸಂಜೆ 5:30ಕ್ಕೆ ಮಡಗಾಂವ್ ತಲುಪಲಿದೆ.

ಇದನ್ನೂ ಓದಿ : ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24 

ಈ ರೈಲಿಗೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ ರೋಡ್, ಅಂಕೋಲ, ಕಾರವಾರ ಹಾಗೂ ಕಾಣಕೋಣ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.

ರೈಲು ನಂ. 06272 ಮಡಗಾಂವ್ ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಎಪ್ರಿಲ್ 5ರ ರವಿವಾರ ಬೆಳಗ್ಗೆ 11:00ಗಂಟೆಗೆ ಮಡಗಾಂವ್ ಜಂಕ್ಷನ್‌ನಿಂದ ಹೊರಡಲಿದ್ದು, ಮರುದಿನ ಮುಂಜಾನೆ 5:20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣ ತಲುಪಲಿದೆ.

ಇದನ್ನೂ ಓದಿ : ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24 

ಈ ರೈಲಿಗೆ ಕಾಣಕೋಣ, ಕಾರವಾರ, ಅಂಕೋಲ, ಗೋಕರ್ಣ ರೋಡ್, ಕುಮಟ, ಹೊನ್ನಾವರ, ಮುರ್ಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್ ಬೈಂದೂರು, ಕುಂದಾಪುರ, ಬಾರಕೂರು, ಉಡುಪಿ, ಮೂಲ್ಕಿ, ಸುರತ್ಕಲ್, ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚೆನ್ನರಾಯಪಟ್ಟಣ, ಕುಣಿಗಲ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.

ಈ ರೈಲು ಒಟ್ಟು 19 ಬೋಗಿಗಳನ್ನು ಹೊಂದಿರುತ್ತದೆ. ಇವುಗಳಲ್ಲಿ 2 ಟಯರ್ ಎಸಿ-2 ಕೋಚ್, 3ಟಯರ್‌ಎಸಿ- 2ಕೋಚ್, ಸ್ಲೀಪರ್- 9 ಕೋಚ್, ಸಾಮಾನ್ಯ-4 ಕೋಚ್ ಹಾಗೂ ಎಸ್‌ಎಲ್‌ಆರ್-2 ಕೋಚ್ ಇರುತ್ತದೆ.

ರೈಲು ನಂ.06272ಕ್ಕೆ ಟಿಕೆಟ್ ಬುಕ್ಕಿಂಗ್ ಎಲ್ಲಾ ಪಿಆರ್‌ಎಸ್‌ನಲ್ಲಿ ಎಪ್ರಿಲ್ ಒಂದರಿಂದ ಪ್ರಾರಂಭ ಗೊಳ್ಳಲಿದೆ. ಇಂಟರ್‌ನೆಟ್ ಹಾಗೂ ಐಆರ್‌ಸಿಟಿಸಿ ವೆಬ್‌ಸೈಟ್‌ಗಳಲ್ಲೂ ಸಹ ಟಿಕೆಟ್‌ಗಳನ್ನು ಕಾದಿರಿಸಬಹುದು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

19 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

19 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

20 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

21 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

22 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

22 hours ago