ರಾಜ್ಯ ನ್ಯೂಸ್

ಈ ಕ್ಷಣ ಚುನಾವಣೆ ನಡೆದರೆ ಕೇಂದ್ರದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ??

ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆ ಮುಕ್ತಾಯ ಕಂಡಿದ್ದು ಈಗ ದೇಶದ ಗಮನ 2019 ರ ಲೋಕಸಭಾ ಚುನಾವಣೆಯತ್ತ ನೆಟ್ಟಿದೆ. 2014ರಲ್ಲಿ ಎಲ್ಲಾ ಸಮೀಕ್ಷೆಗಳನ್ನೆಲ್ಲಾ ಧೂಳಿಪಟ ಮಾಡಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಬಿಜೆಪಿಯ ನರೇಂದ್ರ ಮೋದಿಯವರು ಅಧಿಕಾರಕ್ಕೆ ಏರಿದ್ದರು. ಉತ್ತಮ ಆಡಳಿತ ನೀಡಿ ದೇಶದ ಜನರ ಮೆಚ್ಚುಗೆ ಪಡೆದಿರುವಂತಹ ಮೋದಿ ಸರಕಾರ ತನ್ನ ಆಡಳಿತದ ನಾಲ್ಕನೇ ವರ್ಷ ಪೂರ್ಣಗೊಳಿಸುತ್ತಿರುವ ಈ ಸಂದರ್ಭದಲ್ಲಿಯೇ ಎನ್.ಡಿ.ಎ ಮೈತ್ರಿಕೂಟಕ್ಕೆ ಸಂತಸದ ಸುದ್ದಿಯೊಂದು ಲಭಿಸಿದೆ.

2019 ರ ಲೋಕಸಭಾ ಚುನಾವಣೆಯನ್ನು ಇಂದು ನಡೆಸಿದರೆ ಯಾವ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದರ ಬಗ್ಗೆ ರಾಷ್ಟ್ರೀಯ ವಾಹಿನಿಯಾದ ಎಬಿಪಿ – ಸಿ.ಎಸ್.ಡಿ.ಎಸ್ ಸಂಸ್ಥೆ “ಮೂಡ್ ಆಫ್ ದ ನೇಷನ್ ” ಸಮೀಕ್ಷೆ ನಡೆಸಿತ್ತು. ಈ ಸಮೀಕ್ಷೆ ಬಿಜೆಪಿ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದು. 2019 ರಲ್ಲಿ ಮತ್ತೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದೆ.

ದೇಶದ 19 ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿರುವ ಎ.ಬಿ.ಪಿ – ಸಿ.ಎನ್.ಡಿ.ಎಸ್ ಸಂಸ್ಥೆ 15859 ಜನರನ್ನು ಸಂದರ್ಶಿಸಿ ಈ ಸಮೀಕ್ಷಾ ವರದಿಯನ್ನು ಸಿದ್ಧಪಡಿಸಿದ್ದು ದೇಶದಲ್ಲಿ ಇನ್ನೂ ಮೋದಿ ಅಲೆ ಇದೆ ಎನ್ನುವುದು ಈ ಸಮೀಕ್ಷೆಯಿಂದ ಸ್ಪಷ್ಟವಾಗಿದೆ. ದೇಶದ 543 ಲೋಕಸಭಾ ಸ್ಥಾನಗಳ ಪೈಕಿ ಎನ್. ಡಿ.ಎ ಕೂಟ 274 ಸ್ಥಾನಗಳನ್ನು ಪಡೆಯುವ ಸರಳ ಬಹುಮತ ಪಡೆಯಲಿದೆ ಎಂದು ಈ ಸಮೀಕ್ಷೆ ತಿಳಿಸಿದೆ. ಲೋಕಸಭೆಯಲ್ಲಿ ಸರಳ ಬಹುಮತಕ್ಕೆ 272 ಸ್ಥಾನಗಳ ಮ್ಯಾಜಿಕ್ ನಂಬರ್ ಅಗತ್ಯವಿದ್ದು ಅದನ್ನು ಬಿಜೆಪಿ ಮೈತ್ರಿಕೂಟ ದಾಟಲಿದೆ ಎಂದು ಸಮೀಕ್ಷೆ ಹೇಳಿರುವುದು ಬಿಜೆಪಿ ಪಾಳಯದಲ್ಲಿ ಸಂತಸ ಮೂಡಿಸಿದೆ.

 2014 ರ ಲೋಕಸಭಾ ಚುನಾವಣೆಯಲ್ಲಿ ಧೂಳಿಪಟವಾಗಿದ್ದ ಕಾಂಗ್ರೆಸ್ ನೇತೃತ್ವದ ಯು.ಪಿ.ಎ ಮೈತ್ರಿಕೂಟ ಈ ಬಾರಿ ತನ್ನ ಸ್ಥಿತಿ ಉತ್ತಮಪಡಿಸಿಕೊಳ್ಳಲಿದೆ ಎಂದು ಸಮೀಕ್ಷೆ ತಿಳಿಸಿದ್ದು ಈ ಬಾರಿ 164 ಸ್ಥಾನ ಪಡೆಯಲಿದೆ ಎಂದು ಎಬಿಪಿ ಸಮೀಕ್ಷೆ ತಿಳಿಸಿದೆ.

ಇನ್ನು ಇತರ ಪಕ್ಷಗಳು ಭಾರಿ ಹೊಡೆತ ತಿಂದು 105 ಸ್ಥಾನಗಳಿಗಷ್ಟೆ ಸಮಾಧಾನ ಪಡಲಿವೆ ಎಂದು ಎ.ಬಿ.ಪಿ – ಸಿ.ಎನ್.ಡಿ.ಎಸ್ ಸಮೀಕ್ಷೆ ತಿಳಿಸಿದೆ. ದೇಶದಲ್ಲಿ ಮೋದಿ ಅಲೆ ಈ ಹಿಂದಿಗಿಂತಲೂ ಹೆಚ್ಚಳವಾಗಿರುವುದಕ್ಕೆ 23 ರಾಜ್ಯದಲ್ಲಿ ಬಿಜೆಪಿ ತೋರಿದ ಸಾಧನೆಯಿಂದ ಸ್ಪಷ್ಟವಾಗುತ್ತಿದೆ. 2013 ರಲ್ಲಿನ ಸಮೀಕ್ಷೆಗಳು ಬಿಜೆಪಿಗೆ ಸಿಗುವ ಕಡಿಮೆ ಸ್ಥಾನ ನೀಡಿದ್ದವು ಆದರೆ ಚುನಾವಣಾ ಸಮಯದಲ್ಲಿ ಅದೆಲ್ಲಾ ಧೂಳಿಪಟವಾಗಿ ಯಾರೂ ಎಣಿಸದ ರೀತಿಯಲ್ಲಿ ಎನ್.ಡಿ.ಎ ಮೈತ್ರಿಕೂಟ 336 ಸ್ಥಾನಗಳನ್ನು ಪಡೆದಿತ್ತು. ಈ ಬಾರಿಯೂ ಮೋದಿ ಸರಕಾರ ನೀಡಿದ ಭ್ರಷ್ಟಾಚಾರ ರಹಿತ ಉತ್ತಮ ಆಡಳಿತದ ಪರಿಣಾಮ ಬಿಜೆಪಿಯು ಈ ಬಾರಿ ಕಳೆದ ಬಾರಿಯ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ ಬಿಜೆಪಿ ಕಾರ್ಯಕರ್ತರು. ಆದರೂ ಮತದಾರರ ಅಂತಿಮ ತೀರ್ಪು ಏನು ಅನ್ನುವುದಕ್ಕೆ 2019 ರವರೆಗೆ ಕಾಯಲೇಬೇಕಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago