Featured

ಈ ಬಾರಿಯೂ ಮೋದಿ ಹೆಸರಿನಲ್ಲಿ ವೋಟ್ ಹಾಕಿ ಎಂದು ಬರುವ ನಾಲಾಯಕರಿಗೆ ಚಪ್ಪಲಿಯಲ್ಲಿ ಹೊಡಿರಿ : ಪ್ರಮೋದ್‌ ಮುತಾಲಿಕ್‌ – Vishwanews24

ನಾಚಿಕೆ, ಮಾನ ಮರ್ಯಾದೆ ಇಲ್ಲದೆ ಮೋದಿ ಹೆಸರಿನಲ್ಲಿ ಗೆದ್ದವರು..

ಮೋದಿ ಹೆಸರಿಲ್ಲದೆ ಹಿಂದುತ್ವದ ಕೆಲಸ ಮಾಡಿದ್ದೇನೆ ಎಂದು ಮತ ಕೇಳಿ .. : ಪ್ರಮೋದ್‌ ಮುತಾಲಿಕ್‌

ಕಾರವಾರ, : ಈ ಬಾರಿಯೂ ಮೋದಿಗೆ ವೋಟ್ ಹಾಕಿ ಎಂದು ಬರುವ ನಾಲಾಯಕರಿಗೆ ಚಪ್ಪಲಿಯಲ್ಲಿ ಹೊಡಿರಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಕರೆಕೊಟ್ಟಿದ್ದಾರೆ.

ಶಿರಸಿಯ ಸೈಹಾದ್ರಿ ರಂಗಮಂದಿರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದಿಂದ ಏರ್ಪಡಿಸಲಾಗಿದ್ದ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ದಿಕ್ಸೂಚಿ ಭಾಷಣ ಮಾಡಿರುವ ಅವರು, ಆರೇಳು ಬಾರಿ ಗೆದ್ದವರು ಇಲ್ಲಿದ್ದಾರೆ. ಕರ್ನಾಟಕವನ್ನು ಲೂಟಿ ಮಾಡಿದವರು ಇದ್ದಾರೆ. ಮೊದಲು ಇದ್ದಾಗ ಇವರ ಆಸ್ತಿ ಎಷ್ಟಿತ್ತು, ಈಗ ಎಷ್ಟಿದೆ ಎಂಬುದನ್ನು ಅಳೆಯಲೂ ಆಗದಷ್ಟು ಗಳಿಸಿ ಇಟ್ಟಿದ್ದಾರೆ ಎಂದು ರಾಜ್ಯ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದರು.

ಮಾತು ಮುಂದುವರಿಸಿದ ಅವರು ಯಾರಿಗಾಗಿ ಗಳಿಸಿದ್ದೀರಿ? ಯಾರಿಗಾಗಿ ಬಂದಿದ್ದು ಎಂಬುದು ನೆನಪಿದೆಯಾ? ಜನಸಂಘ ಹುಟ್ಟಿದ್ದು ಯಾಕೆ ಎನ್ನುವುದು ನೆನಪಿದೆಯಾ? ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಮೋದಿ ಹೇಳಿದ್ದು ನೆನಪಿದೆಯಾ? ಎಂದು ಕಿಡಿಕಾರಿದರು.

ಸಾವಿರಾರು ವರ್ಷಗಳಿಂದಲೂ ಗೋಮಾತೆಯನ್ನು ಉಳಿಸಿ ಎಂದು ಋಷಿಮುನಿಗಳು ಹೇಳುತ್ತಿದ್ದಾರೆ. ಗ್ರಾಮದಿಂದ ಕೇಂದ್ರದವರೆಗೂ ನಮ್ಮದೇ ಸರ್ಕಾರವಿದ್ದರೂ ಒಂದು ಆಕಳು ಉಳಿಸಲು ಆಗುತ್ತಿಲ್ಲ. ಕಾನೂನಿದೆ, ಪೊಲೀಸರಿದ್ದಾರೆ, ಅಧಿಕಾರವಿದೆ. ಆದರೆ ಇಚ್ಛಾಶಕ್ತಿ ಎನ್ನುವುದಿಲ್ಲ. ಆರೇಳು ಬಾರಿ ಸಂಸದರು, ಶಾಸಕರಾದವರು ಇದ್ದಾರೆ. ಆದರೆ ಅವರಿಗೆ ಆಕಳ ರೋಧನೆ ಕೇಳಿಸುತ್ತಿಲ್ಲ, ಅದರ ನೆತ್ತರ ಕಾಣುತ್ತಿಲ್ಲವೇ? ಅದರ ಶಾಪ ತಟ್ಟುತ್ತೆ ಎಂದಿದ್ದಾರೆ.

ಗೋವಾಕ್ಕೆ ಗೋಮಾಂಸ ರಫ್ತಾಗುತ್ತಿರುವುದು ಗೊತ್ತಾಗುತ್ತಿಲ್ಲವೇ? ಹಿಂದೂ ಸಂಘಟನೆಗಳೇ ಹಿಡಿದು ನಾವೇ ಕೇಸು ಹಾಕಿಕೊಂಡು ಜೈಲಿಗೆ ಹೋಗಬೇಕಾ? ಹಾಗಾದರೆ ನೀವ್ಯಾಕಿರೋದು? ಸಗಣಿ ತಿನ್ನೋದಕ್ಕಾ? ಗೋಮಾತೆಯನ್ನ ರಕ್ಷಣೆ ಮಾಡಲು, ಅದರ ನೆತ್ತರ ಹರಿಯುವುದನ್ನು ತಡೆಯಲು ಆಗದಿದ್ದರೆ ದಯವಿಟ್ಟು ಬೇರೆಯವರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

ನಾಚಿಕೆ, ಮಾನ ಮರ್ಯಾದೆ ಇಲ್ಲದೆ ಮೋದಿ ಹೆಸರಿನಲ್ಲಿ ಗೆದ್ದವರು, ಈ ಬಾರಿ ಮೋದಿ ಹೆಸರಿಲ್ಲದೆ, ಬ್ಯಾನರ್- ಪಾಂಪ್ಲೆಟ್‌ನಲ್ಲಿ ಮೋದಿ ಫೋಟೋ ಇಲ್ಲದೆ, ತಾಕತ್ತಿದ್ದರೆ, ಎದೆ ತಟ್ಟಿ ಅಭಿವೃದ್ಧಿ ಮಾಡಿದ್ದೇನೆ, ಗೋಮಾತೆ ಉಳಿಸಿದ್ದೇನೆ, ಹಿಂದುತ್ವದ ಕೆಲಸ ಮಾಡಿದ್ದೇನೆ ಎಂದು ಮತ ಕೇಳಿ ಎಂದು ಸವಾಲು ಹಾಕಿದ್ದಾರೆ.

ಮೋದಿ ಹೆಸರಿನಲ್ಲಿ ಮತ ಪಡೆದವರಿಗೆ ಕಾರ್ಯಕರ್ತರ ಕಷ್ಟ ಗೊತ್ತಾಗಲಿಲ್ಲ. ಕೇಸು ಹಾಕಿಕೊಂಡಿದ್ದು ಗೊತ್ತಾಗಲಿಲ್ಲ. ಪರೇಶ್ ಮೇಸ್ತಾ ಅನಾಥವಾಗಿ ಹೋದ. ರಕ್ತ ಬಲಿದಾನವಾದರೂ ಏನೂ ಆಗಲಿಲ್ಲ. ಅವನ ಹೆಣದ ಮೇಲೆ ರಾಜಕೀಯ ಮಾಡಿದರು. ಅವನ ಆತ್ಮ ನ್ಯಾಯ ಕೊಡಿಸಿ ಎಂದು ಹೇಳುತ್ತಿದೆ. ನನ್ನ ತಂದೆ- ತಾಯಿಯನ್ನ ವೇದಿಕೆ ಮೇಲೆ ಕೂರಿಸಿ ಹಿಂದೂಗಳ ಆಕ್ರೋಶದ ಲಾಭ ಪಡೆದ ನಾಲಾಯಕ, ನಿರ್ಲಜ್ಜರು ನೀವು, ನ್ಯಾಯ ಕೊಡಿ ಎಂದು ಅವನ ಆತ್ಮ ಹೇಳುತ್ತಿದೆ. ಛತ್ರಪತಿ ಶಿವಾಜಿಯಂತೆ ಹೋರಾಡಬೇಕಾದ ಅನಿವಾರ್ಯತೆ ಇಂದಿದೆ ಎಂದಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago