ಕಾರವಾರ, : ಈ ಬಾರಿಯೂ ಮೋದಿಗೆ ವೋಟ್ ಹಾಕಿ ಎಂದು ಬರುವ ನಾಲಾಯಕರಿಗೆ ಚಪ್ಪಲಿಯಲ್ಲಿ ಹೊಡಿರಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕರೆಕೊಟ್ಟಿದ್ದಾರೆ.
ಶಿರಸಿಯ ಸೈಹಾದ್ರಿ ರಂಗಮಂದಿರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದಿಂದ ಏರ್ಪಡಿಸಲಾಗಿದ್ದ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ದಿಕ್ಸೂಚಿ ಭಾಷಣ ಮಾಡಿರುವ ಅವರು, ಆರೇಳು ಬಾರಿ ಗೆದ್ದವರು ಇಲ್ಲಿದ್ದಾರೆ. ಕರ್ನಾಟಕವನ್ನು ಲೂಟಿ ಮಾಡಿದವರು ಇದ್ದಾರೆ. ಮೊದಲು ಇದ್ದಾಗ ಇವರ ಆಸ್ತಿ ಎಷ್ಟಿತ್ತು, ಈಗ ಎಷ್ಟಿದೆ ಎಂಬುದನ್ನು ಅಳೆಯಲೂ ಆಗದಷ್ಟು ಗಳಿಸಿ ಇಟ್ಟಿದ್ದಾರೆ ಎಂದು ರಾಜ್ಯ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದರು.
ಮಾತು ಮುಂದುವರಿಸಿದ ಅವರು ಯಾರಿಗಾಗಿ ಗಳಿಸಿದ್ದೀರಿ? ಯಾರಿಗಾಗಿ ಬಂದಿದ್ದು ಎಂಬುದು ನೆನಪಿದೆಯಾ? ಜನಸಂಘ ಹುಟ್ಟಿದ್ದು ಯಾಕೆ ಎನ್ನುವುದು ನೆನಪಿದೆಯಾ? ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಮೋದಿ ಹೇಳಿದ್ದು ನೆನಪಿದೆಯಾ? ಎಂದು ಕಿಡಿಕಾರಿದರು.
ಸಾವಿರಾರು ವರ್ಷಗಳಿಂದಲೂ ಗೋಮಾತೆಯನ್ನು ಉಳಿಸಿ ಎಂದು ಋಷಿಮುನಿಗಳು ಹೇಳುತ್ತಿದ್ದಾರೆ. ಗ್ರಾಮದಿಂದ ಕೇಂದ್ರದವರೆಗೂ ನಮ್ಮದೇ ಸರ್ಕಾರವಿದ್ದರೂ ಒಂದು ಆಕಳು ಉಳಿಸಲು ಆಗುತ್ತಿಲ್ಲ. ಕಾನೂನಿದೆ, ಪೊಲೀಸರಿದ್ದಾರೆ, ಅಧಿಕಾರವಿದೆ. ಆದರೆ ಇಚ್ಛಾಶಕ್ತಿ ಎನ್ನುವುದಿಲ್ಲ. ಆರೇಳು ಬಾರಿ ಸಂಸದರು, ಶಾಸಕರಾದವರು ಇದ್ದಾರೆ. ಆದರೆ ಅವರಿಗೆ ಆಕಳ ರೋಧನೆ ಕೇಳಿಸುತ್ತಿಲ್ಲ, ಅದರ ನೆತ್ತರ ಕಾಣುತ್ತಿಲ್ಲವೇ? ಅದರ ಶಾಪ ತಟ್ಟುತ್ತೆ ಎಂದಿದ್ದಾರೆ.
ಗೋವಾಕ್ಕೆ ಗೋಮಾಂಸ ರಫ್ತಾಗುತ್ತಿರುವುದು ಗೊತ್ತಾಗುತ್ತಿಲ್ಲವೇ? ಹಿಂದೂ ಸಂಘಟನೆಗಳೇ ಹಿಡಿದು ನಾವೇ ಕೇಸು ಹಾಕಿಕೊಂಡು ಜೈಲಿಗೆ ಹೋಗಬೇಕಾ? ಹಾಗಾದರೆ ನೀವ್ಯಾಕಿರೋದು? ಸಗಣಿ ತಿನ್ನೋದಕ್ಕಾ? ಗೋಮಾತೆಯನ್ನ ರಕ್ಷಣೆ ಮಾಡಲು, ಅದರ ನೆತ್ತರ ಹರಿಯುವುದನ್ನು ತಡೆಯಲು ಆಗದಿದ್ದರೆ ದಯವಿಟ್ಟು ಬೇರೆಯವರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.
ನಾಚಿಕೆ, ಮಾನ ಮರ್ಯಾದೆ ಇಲ್ಲದೆ ಮೋದಿ ಹೆಸರಿನಲ್ಲಿ ಗೆದ್ದವರು, ಈ ಬಾರಿ ಮೋದಿ ಹೆಸರಿಲ್ಲದೆ, ಬ್ಯಾನರ್- ಪಾಂಪ್ಲೆಟ್ನಲ್ಲಿ ಮೋದಿ ಫೋಟೋ ಇಲ್ಲದೆ, ತಾಕತ್ತಿದ್ದರೆ, ಎದೆ ತಟ್ಟಿ ಅಭಿವೃದ್ಧಿ ಮಾಡಿದ್ದೇನೆ, ಗೋಮಾತೆ ಉಳಿಸಿದ್ದೇನೆ, ಹಿಂದುತ್ವದ ಕೆಲಸ ಮಾಡಿದ್ದೇನೆ ಎಂದು ಮತ ಕೇಳಿ ಎಂದು ಸವಾಲು ಹಾಕಿದ್ದಾರೆ.
ಮೋದಿ ಹೆಸರಿನಲ್ಲಿ ಮತ ಪಡೆದವರಿಗೆ ಕಾರ್ಯಕರ್ತರ ಕಷ್ಟ ಗೊತ್ತಾಗಲಿಲ್ಲ. ಕೇಸು ಹಾಕಿಕೊಂಡಿದ್ದು ಗೊತ್ತಾಗಲಿಲ್ಲ. ಪರೇಶ್ ಮೇಸ್ತಾ ಅನಾಥವಾಗಿ ಹೋದ. ರಕ್ತ ಬಲಿದಾನವಾದರೂ ಏನೂ ಆಗಲಿಲ್ಲ. ಅವನ ಹೆಣದ ಮೇಲೆ ರಾಜಕೀಯ ಮಾಡಿದರು. ಅವನ ಆತ್ಮ ನ್ಯಾಯ ಕೊಡಿಸಿ ಎಂದು ಹೇಳುತ್ತಿದೆ. ನನ್ನ ತಂದೆ- ತಾಯಿಯನ್ನ ವೇದಿಕೆ ಮೇಲೆ ಕೂರಿಸಿ ಹಿಂದೂಗಳ ಆಕ್ರೋಶದ ಲಾಭ ಪಡೆದ ನಾಲಾಯಕ, ನಿರ್ಲಜ್ಜರು ನೀವು, ನ್ಯಾಯ ಕೊಡಿ ಎಂದು ಅವನ ಆತ್ಮ ಹೇಳುತ್ತಿದೆ. ಛತ್ರಪತಿ ಶಿವಾಜಿಯಂತೆ ಹೋರಾಡಬೇಕಾದ ಅನಿವಾರ್ಯತೆ ಇಂದಿದೆ ಎಂದಿದ್ದಾರೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…