Featured

ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ , ಉತ್ತಮವಾದ ಬಜೆಟ್ : ಬಿಜೆಪಿ ಹಲಾಲ್ ಬಜೆಟ್ ಹೇಳಿಕೆ ಡಿಕೆಶಿ ಪ್ರತಿಕ್ರಿಯೆ – vishwanews24

ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ , ಉತ್ತಮವಾದ ಬಜೆಟ್ : ಬಿಜೆಪಿ ಹಲಾಲ್ ಬಜೆಟ್ ಹೇಳಿಕೆ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು: ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ. ನಮ್ಮ ಬಜೆಟ್ ಅನ್ನು ಬೇರೆಬೇರೆ ರಾಜ್ಯಗಳು ಗಮನಿಸುತ್ತಾರೆ. ಇದು ಉತ್ತಮವಾದ ಬಜೆಟ್. ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.

ಬಜೆಟ್ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟನಲ್ ಆಗೇ ಆಗುತ್ತೆ. ಹೊಸ ಮೆಟ್ರೋ ಏನೇ ಮಾಡಿದರೂ ಅದರ ಜೊತೆಗೆ ಎಲಿವೇಟೇಡ್ ಕಾರಿಡಾರ್ ಕೂಡ ನಾವು ಮಾಡುತ್ತೇವೆ. 50% ಕಾರ್ಪೋರೇಷನ್, 50% ಬಿಎಂಆರ್‌ಸಿಎಲ್ ಕೊಡುತ್ತದೆ. ನಾವು ಕಾರಿಡಾರ್ ಮಾಡುತ್ತೇವೆ ಎಂದರು.

ನಾವು ಹೇಳಿದಂತೆ 300 ಕಿಮೀ ರಸ್ತೆ ನಿರ್ಮಾಣ ಮಡುತ್ತೇವೆ. ಕಾಲುವೆ ಪಕ್ಕದಲ್ಲಿ 50 ಅಡಿ ಬಿಟ್ಟು ರಸ್ತೆ ನಿರ್ಮಾಣ ಮಾಡುತ್ತೇವೆ. ಅದರ ಬದಲಾಗಿ ಅವರಿಗೆ ಟಿಡಿಆರ್ ಕೊಟ್ಟು ಅಲ್ಲಿ ರೋಡ್ ಮಾಡುತ್ತೇವೆ. ಹೀಗಾಗಿ 3000 ಕೋಟಿ ವೆಚ್ಚದಲ್ಲಿ 300 ಕಿ.ಮೀ ರಸ್ತೆ ನಿರ್ಮಾಣ ಆಗಲಿದೆ ಎಂದು ತಿಳಿಸಿದರು.

ಬಿಜೆಪಿ ಹಲಾಲ್ ಬಜೆಟ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಏನು ಬೇಕಾದರೂ ಮಾತಾಡಲಿ. ಪಾಪ ಅವರು ಇನ್ನೇನು ಮಾಡುತ್ತಾರೆ? ಇನ್ನೇನು ಹೇಳೋಕೆ ಸಾಧ್ಯ? ಸತ್ಯನಾ ಮುಚ್ಚಿಡೋಕೆ ಆಗುತ್ತಾ? ಬಿಜೆಪಿಯವರು ಬಜೆಟ್‌ನ ಕಣ್ಣಲ್ಲಿ ಓದಿದ್ದಾರೆ, ಕಿವಿಯಲ್ಲಿ ಕೇಳಿಸಿಕೊಡಿದ್ದಾರೆ. ಬಾಯಲ್ಲಿ ಇನ್ನೇನು ಮಾತಾಡಬಹುದು. ಬಾಯಲ್ಲಿ ಸುಳ್ಳು ಹೇಳಬಹುದು ಅಲ್ವಾ, ಹಾಗಾಗಿ ಅದನ್ನ ಮಾಡುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು.

ನೀರಾವರಿಗೆ ಕಳೆದ ಬಾರಿಗಿಂತ ಈ ಬಾರಿ 2,000 ಕೋಟಿ ಅನುದಾನ ಹೆಚ್ಚು ಕೊಟ್ಟಿದ್ದೇವೆ. ಮಧ್ಯದಲ್ಲಿ ಬೇರೆಬೇರೆ ಯೋಜನೆಗಳನ್ನು ಘೋಷಣೆ ಮಾಡುತ್ತೇವೆ. ಬೋರ್ಡ್‌ನಲ್ಲಿ ಅನೇಕ ತೀರ್ಮಾನಗಳನ್ನ ಮಾಡಿದ್ದೇವೆ. ಅದನ್ನು ಸಭೆಯಲ್ಲಿ ಹೇಳುತ್ತೇನೆ ಎಂದರು.

ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ಇಟ್ಟಿರುವ ವಿಚಾರದ ಕುರಿತು ಮಾತನಾಡಿ, ಅವರು ಯಾವ್ಯಾವುದೋ ಹೆಸರು ಇಡುತ್ತಾರೆ. ಮನಮೋಹನ್ ಸಿಂಗ್ ಹೆಸರು ಇಡಬಾರದ? ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ಗೆ ಫ್ಲೈಓವರ್ ಮಾಡಿದ್ದು ಯಾರು? ಎಲೆಕ್ಟ್ರಾನಿಕ್‌ ಸಿಟಿಗೆ ಫ್ಲೈಓವರ್ ಮಾಡಿದ್ದು ಯಾರು?ನೆಲಮಂಗಲ ಫ್ಲೈಓವರ್ ಮಾಡಿದ್ದು ಯಾರು? ನರೇಗಾ ತಂದಿದ್ದು ಯಾರು? ಬಿಜೆಪಿಯವರು ಏನಾದರೂ ಮಾಡಿದ್ದಾರ ಎಂದು ಪ್ರಶ್ನಿಸಿದರು.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

3 days ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

3 days ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

3 days ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

3 days ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

3 days ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

3 days ago