Featured

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಗಳೂರಿನ ಜನ ಬದಲಾವಣೆಯನ್ನು ತರಲಿದ್ದಾರೆ : ಡಿ.ಕೆ.ಶಿವಕುಮಾರ್ – Vishwanews24

ರಾಜಕೀಯ ತಂತ್ರಗಾರಿಕೆಯನ್ನು ಸಾಧಿಸಲು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಿದ್ದೇವೆ

ಮಂಗಳೂರಿನಲ್ಲಿ ಬಿಜೆಪಿಗೆ  ಪರೋಕ್ಷ ಎಚ್ಚರಿಕೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ  ಮಂಗಳೂರು ಹೊರವಲಯದ ಬಿ.ಸಿ.ರೋಡ್ ನಲ್ಲಿರುವ ಆಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಮೈದಾನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಶನಿವಾರ (ಫೆ 17) ಮಧ್ಯಾಹ್ನ ಎರಡು ಗಂಟೆಗೆ ಆಯೋಜಿಸಿದೆ.

ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಭಾಗಿಯಾಗಲಿದ್ದಾರೆ. ಬಿಜೆಪಿಯ ಭದ್ರಕೋಟೆಯೆಂದೇ ಗುರುತಿಸಲ್ಪಡುವ ಈ ಭಾಗದಲ್ಲಿ ಕಾರ್ಯಕರ್ತರ ಸಮಾವೇಶ ಆಯೋಜಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರಣವನ್ನು ವಿವರಿಸಿದ್ದಾರೆ.

” ರಾಜಕಾರಣದಲ್ಲಿ ಯಾವುದೂ ಶಾಸ್ವತವಲ್ಲ, ಯಾವುದೂ ಅಸಾಧ್ಯವೂ ಅಲ್ಲ. ಅಸಾಧ್ಯ ಎಂದು ಭಾವಿಸಲಾಗಿರುವ ರಾಜಕೀಯ ತಂತ್ರಗಾರಿಕೆಯನ್ನು ಸಾಧಿಸಲು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಿದ್ದೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

” ರಾಜಕಾರಣ ಎನ್ನುವುದು ವಿಶ್ವಾಸದ ಕಲೆ, ನನಗೆ ಖಚಿತ ಭರವಸೆಯಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಲ್ಲಿನ ಜನ ಬದಲಾವಣೆಯನ್ನು ತರಲಿದ್ದಾರೆ. ಯಾಕೆಂದರೆ ಈ ಭಾಗದಲ್ಲಿರುವ ಪ್ರಮುಖ ಸಮಸ್ಯೆ ನಿರುದ್ಯೋಗ. ಯುವಕರು /ವಿದ್ಯಾರ್ಥಿಗಳು ಕೆಲಸವನ್ನು ಅರಸಿ ಮುಂಬೈ, ದುಬೈ, ಸೌದಿ, ಬೆಂಗಳೂರಿಗೆ ಹೋಗುತ್ತಿದ್ದಾರೆ. ಆಡಳಿತ ಮಂಡಳಿಯವರು, ಇಲ್ಲಿನ ಅಶಾಂತಿಯಿಂದಾಗಿ ವಿದ್ಯಾರ್ಥಿಗಳ ದಾಖಲಾತಿ ಕಮ್ಮಿಯಾಗುತ್ತಿದೆ ಎಂದು ಸಮಸ್ಯೆ ತೋಡಿಕೊಂಡಿದ್ದಾರೆ” ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

3 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

3 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

3 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

4 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

4 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

5 hours ago