Featured

ಈ ಬಾರಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳೇ ನನ್ನ ಕೈ ಹಿಡಿಯಲಿವೆ: ಗೀತಾ ಶಿವರಾಜ್ ಕುಮಾರ್ ವಿಶ್ವಾಸ – Vishwanews24

ಈ ಬಾರಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳೇ ನನ್ನ ಕೈ ಹಿಡಿಯಲಿವೆ: ಗೀತಾ ಶಿವರಾಜ್ ಕುಮಾರ್ ವಿಶ್ವಾಸ

ಶಿವಮೊಗ್ಗ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆದಿದೆ. ಈ ಒಂದು ಹಂತದಲ್ಲಿ ಶೇಕಡ 66 ರಷ್ಟು ಮತದಾನ ನಡೆದಿದೆ. ಈ ಮಧ್ಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್ ಕುಮಾರ್ ಈ ಬಾರಿ ಗ್ಯಾರಂಟಿ ಯೋಜನೆಗಳೇ ನನ್ನ ಕೈ ಹಿಡಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಎಂಬಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿ ಮಾಡಿರುವ ಐದು ಗ್ಯಾರಂಟಿಗಳು, ಪ್ರತಿ ಕುಟುಂಬಕ್ಕೂ ತಲುಪಿದೆ. ಮತ್ತೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‍ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ ಐದು ಗ್ಯಾರಂಟಿಗಳನ್ನು ಈಡೇರಿಸುತ್ತದೆ ಎಂಬ ನಂಬಿಕೆ, ವಿಶ್ವಾಸ ಕ್ಷೇತ್ರದ ಮತದಾರರಲ್ಲಿ ಇರುವುದರಿಂದ ನನಗೆ ಗೆಲುವು ಸಿಗುತ್ತದೆ ಎಂದು ತಿಳಿಸಿದರು.

ನಮ್ಮ ತಂದೆ ಬಂಗಾರಪ್ಪನವರು ಬಡವರಿಗಾಗಿ ಅನೇಕ ಯೋಜನೆಗಳನ್ನು ತಂದಿದ್ದರು, ಕಳೆದ ಚುನಾವಣೆಯಲ್ಲಿ ಬಿಜೆಪಿ ಭಾವನಾತ್ಮಕ ಹೇಳಿಕೆಗಳಿಂದ ಗೆದ್ದಿರಬಹುದು.ಆದರೆ ಈಗ ಜನರಿಗೆ ಅರ್ಥವಾಗಿದೆ. ಕಾಂಗ್ರೆಸ್ ಎಲ್ಲಾ ಧರ್ಮ ಹಾಗೂ ಜಾತಿಗಳನ್ನು ಸಮಾನವಾಗಿ ಕಾಣುತ್ತಾ ಸರ್ವಧರ್ಮಗಳ ಪರವಾಗಿದೆ.ಹಾಗಾಗಿ ಕ್ಷೇತ್ರದ ಜನ ನನ್ನ ಕೈ ಹಿಡಿಯುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

 

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

2 days ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 days ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 days ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

2 days ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

2 days ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

2 days ago