Featured

ಈ ಬಾರಿ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ಜನರ ಧ್ವನಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಏನೇನು ಬೇಕು ಆ ಕೆಲಸ ಮಾಡುತ್ತೇನೆ : ಜಯಪ್ರಕಾಶ್ ಹೆಗ್ಡೆ – Vishwanews24

ಈ ಬಾರಿ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ತಮ್ಮ ಕೈಯನ್ನು ತಾವು ಬಲಪಡಿಸಿಕೊಂಡತ್ತಾಗುತ್ತದೆ ;  ಜಯಪ್ರಕಾಶ್ ಹೆಗ್ಡೆ

ಚಿಕ್ಕಮಗಳೂರು: ಬಡಜನರ ಬದುಕು ಗಟ್ಟಿಗೊಳಿಸಲು ಗ್ಯಾರಂಟಿ ಯೋಜನೆಗಳನ್ನು ನೀಡಿದರೆ ಬಿಜೆಪಿ ನಾಯಕರು ಅದರ ಬಗ್ಗೆ ಚರ್ಚೆ ಮಾಡುತ್ತಾರೆ. ಜೊತೆಗೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ ಆದರೆ ದೊಡ್ಡ ದೊಡ್ಡ ಉದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದಾಗ ಇದೆ ನಾಯಕರು ಚರ್ಚೆ ಮಾಡಲ್ಲ. ಹೀಗೆ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರೆ ದೇಶ ದಿವಾಳಿಯಾಗುವುದಿಲ್ಲವೇ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಪ್ರಶ್ನಿಸಿದರು.

ನಗರದ ಒಕ್ಕಲಿಗರ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಈ ಬಾರಿ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ತಮ್ಮ ಕೈಯನ್ನು ತಾವು ಬಲಪಡಿಸಿಕೊಂಡತ್ತಾಗುತ್ತದೆ. ನಾನು ಜನರ ಧ್ವನಿಯಾಗಿ ಕೆಲಸ ಮಾಡುವ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಏನೇನು ಬೇಕು ಆ ಕೆಲಸ ಮಾಡುತ್ತೇನೆ. ಜನರ ಮಧ್ಯೆ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ನನ್ನದು. ಇದರೊಂದಿಗೆ ಅಭಿವೃದ್ಧಿಗೂ ಒತ್ತು ನೀಡುತ್ತೇನೆ ಎಂದರು.

ಜನರಿಂದ ಅಧಿಕಾರಕ್ಕೆ ಬಂದ ಮೇಲೆ ಕೆಲಸ ಮಾಡದೆ ಬೆಂಗಳೂರಿನಲ್ಲಿ ಕೂರಬಾರದು. ಹೀಗೆ ಮಾಡಿದರೆ ಅದು ಜನರಿಗೆ ಮೋಸ ಮಾಡಿದಂತೆ. ನಾನು 2 ವರ್ಷ ಸಂಸದನಾಗಿದ್ದಾಗ ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳ ಪ್ರತಿ ಗ್ರಾಪಂ ಮಟ್ಟದಲ್ಲೂ ಕೆಲಸ ಮಾಡಿದ್ದೇನೆ. ಈ ಬಾರಿ ಜನ ನನ್ನನ್ನು ಆಶೀರ್ವದಿಸುವ ವಿಶ್ವಾಸವಿದೆ ಎಂದರು. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಯಾರು ಸ್ಪಂದಿಸುತ್ತಾರೆ ಎಂಬುದನ್ನು ಜನ ನಿರ್ಧಾರ ಮಾಡಬೇಕು. ಬಿಜೆಪಿಗರಿಗೆ ನನ್ನ ಮೇಲೆ ಆರೋಪ ಮಾಡಲು ಯಾವುದೇ ವಿಷಯಗಳಿಲ್ಲ ಹೀಗಾಗಿ ನನ್ನ ಹೇಳಿಕೆ ತಿರುಚಿ ಆರೋಪ ಮಾಡುತ್ತಿದ್ದಾರೆ ಇದು ಫಲ ನೀಡಲ್ಲ ಎಂದರು

ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ವಹಿಸಿದ್ದರು. ಶಾಸಕರಾದ ರಾಜೇಗೌಡ, ಜಿ ಎಚ್ ಶ್ರೀನಿವಾಸ್, ತಮ್ಮಯ್ಯ, ನಯನಾ ಮೋಟಮ್ಮ, ಮಾಜಿ ಸಚಿವರಾದ ಮೋಟಮ್ಮ, ಬಿಬಿ ನಿಂಗಯ್ಯ, ಡಾ. ಬಿ ಎಲ್ ಶಂಕರ್, ವಿಪ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಎಐಸಿಸಿ ಕಾರ್ಯದರ್ಶಿ ಬಿಎಂ ಸಂದೀಪ್, ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ, ಬಿಪಿ ಹರೀಶ್, ಡಾ, ಡಿ ಎಲ್ ವಿಜಯಕುಮಾರ್ ಮಂಜೇಗೌಡ, ಶಿವಾನಂದ ಸ್ವಾಮಿ ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

18 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

19 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

19 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

19 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago