Featured

ಈ ಬಾರಿ ತುಳು ಪರೀಕ್ಷೆ ಬರೆಯಲಿದ್ದಾರೆ 918 ವಿದ್ಯಾರ್ಥಿಗಳು – Vishwanews24

ಈ ಬಾರಿ ತುಳು ಪರೀಕ್ಷೆ ಬರೆಯಲಿದ್ದಾರೆ 918 ವಿದ್ಯಾರ್ಥಿಗಳು – Vishwanews24

ಮಹಾನಗರ: ತುಳು ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ರಾಜ್ಯ ಸರಕಾರವು 2014-15ನೇ ಸಾಲಿನಿಂದ ಎಸೆಸೆಲ್ಸಿಯಲ್ಲಿ ತುಳು ಪಠ್ಯ ವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಿದ್ದು, ದ.ಕ,ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿ 918 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಜು. 22ರಂದು ಎಸೆಸೆಲ್ಸಿ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಕಳೆದ ವರ್ಷ ಒಟ್ಟು 956 ವಿದ್ಯಾರ್ಥಿಗಳು ತುಳು ಪಠ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದರು. ಎರಡೂ ಜಿಲ್ಲೆಗಳ ತಾಲೂಕುಗಳ ಪೈಕಿ ಪುತ್ತೂರಿ ನಲ್ಲಿ ಈ ಬಾರಿ ಅತೀ ಹೆಚ್ಚು ವಿದ್ಯಾರ್ಥಿ ಗಳಿದ್ದು, ಬೆಳ್ತಂಗಡಿ 2ನೇ ಸ್ಥಾನದಲ್ಲಿದೆ. ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಗರಿಷ್ಠ ಅಂದರೆ 70 (ಕಳೆದ ವರ್ಷ 197)ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ತುಳು ಪರೀಕ್ಷೆ ಬರೆಯಲಿದ್ದಾರೆ.

ತುಳು ಕಲಿಯುತ್ತಿರುವ 2,270 ವಿದ್ಯಾರ್ಥಿಗಳುಈ ಬಾರಿ ದ.ಕ., ಉಡುಪಿ ಜಿಲ್ಲೆಯ 43 ಶಾಲೆಯಲ್ಲಿ ಒಟ್ಟು 2,270 ವಿದ್ಯಾರ್ಥಿಗಳು 2020-21ರ ಸಾಲಿನಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ವ್ಯಾಸಂಗ ಮಾಡುತ್ತಿದ್ದಾರೆ.

6ನೇ ತರಗತಿಯಲ್ಲಿ 94, 7ನೇ ತರಗತಿಯಲ್ಲಿ 105, 8ನೇ ತರಗತಿಯಲ್ಲಿ 406, 9ನೇ ತರಗತಿಯಲ್ಲಿ 747 ಹಾಗೂ 10ನೇ ತರಗತಿಯಲ್ಲಿ 918 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಅಭ್ಯಸಿಸುತ್ತಿದ್ದಾರೆ. ಈ ಪೈಕಿ ಪುತ್ತೂರು ತಾಲೂಕಿನಲ್ಲಿ 1,114, ಸುಳ್ಯ ತಾಲೂಕಿನಲ್ಲಿ 144, ಬೆಳ್ತಂಗಡಿಯಲ್ಲಿ 573, ಬಂಟ್ವಾಳದಲ್ಲಿ 108, ಮಂಗಳೂರು ತಾಲೂಕಿನಲ್ಲಿ 136, ಉಡುಪಿ ತಾಲೂಕಿನಲ್ಲಿ 195 ವಿದ್ಯಾರ್ಥಿಗಳಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

10 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

1 day ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

1 day ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

1 day ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

1 day ago