ಮಹಾನಗರ: ತುಳು ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ರಾಜ್ಯ ಸರಕಾರವು 2014-15ನೇ ಸಾಲಿನಿಂದ ಎಸೆಸೆಲ್ಸಿಯಲ್ಲಿ ತುಳು ಪಠ್ಯ ವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಿದ್ದು, ದ.ಕ,ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿ 918 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಜು. 22ರಂದು ಎಸೆಸೆಲ್ಸಿ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಕಳೆದ ವರ್ಷ ಒಟ್ಟು 956 ವಿದ್ಯಾರ್ಥಿಗಳು ತುಳು ಪಠ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದರು. ಎರಡೂ ಜಿಲ್ಲೆಗಳ ತಾಲೂಕುಗಳ ಪೈಕಿ ಪುತ್ತೂರಿ ನಲ್ಲಿ ಈ ಬಾರಿ ಅತೀ ಹೆಚ್ಚು ವಿದ್ಯಾರ್ಥಿ ಗಳಿದ್ದು, ಬೆಳ್ತಂಗಡಿ 2ನೇ ಸ್ಥಾನದಲ್ಲಿದೆ. ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಗರಿಷ್ಠ ಅಂದರೆ 70 (ಕಳೆದ ವರ್ಷ 197)ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ತುಳು ಪರೀಕ್ಷೆ ಬರೆಯಲಿದ್ದಾರೆ.
ತುಳು ಕಲಿಯುತ್ತಿರುವ 2,270 ವಿದ್ಯಾರ್ಥಿಗಳುಈ ಬಾರಿ ದ.ಕ., ಉಡುಪಿ ಜಿಲ್ಲೆಯ 43 ಶಾಲೆಯಲ್ಲಿ ಒಟ್ಟು 2,270 ವಿದ್ಯಾರ್ಥಿಗಳು 2020-21ರ ಸಾಲಿನಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ವ್ಯಾಸಂಗ ಮಾಡುತ್ತಿದ್ದಾರೆ.
6ನೇ ತರಗತಿಯಲ್ಲಿ 94, 7ನೇ ತರಗತಿಯಲ್ಲಿ 105, 8ನೇ ತರಗತಿಯಲ್ಲಿ 406, 9ನೇ ತರಗತಿಯಲ್ಲಿ 747 ಹಾಗೂ 10ನೇ ತರಗತಿಯಲ್ಲಿ 918 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಅಭ್ಯಸಿಸುತ್ತಿದ್ದಾರೆ. ಈ ಪೈಕಿ ಪುತ್ತೂರು ತಾಲೂಕಿನಲ್ಲಿ 1,114, ಸುಳ್ಯ ತಾಲೂಕಿನಲ್ಲಿ 144, ಬೆಳ್ತಂಗಡಿಯಲ್ಲಿ 573, ಬಂಟ್ವಾಳದಲ್ಲಿ 108, ಮಂಗಳೂರು ತಾಲೂಕಿನಲ್ಲಿ 136, ಉಡುಪಿ ತಾಲೂಕಿನಲ್ಲಿ 195 ವಿದ್ಯಾರ್ಥಿಗಳಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…