Featured

ಈ ಬಾರಿ ತುಳು ಪರೀಕ್ಷೆ ಬರೆಯಲಿರುವ 918 ವಿದ್ಯಾರ್ಥಿಗಳು-vishwanews24

ಈ ಬಾರಿ ತುಳು ಪರೀಕ್ಷೆ ಬರೆಯಲಿರುವ 918 ವಿದ್ಯಾರ್ಥಿಗಳು-
ಮಹಾನಗರ: ತುಳು ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ರಾಜ್ಯ ಸರಕಾರವು 2014-15ನೇ ಸಾಲಿನಿಂದ ಎಸೆಸೆಲ್ಸಿಯಲ್ಲಿ ತುಳು ಪಠ್ಯ ವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಿದ್ದು, ದ.ಕ,ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿ 918 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜು. 22ರಂದು ಎಸೆಸೆಲ್ಸಿ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಕಳೆದ ವರ್ಷ ಒಟ್ಟು 956 ವಿದ್ಯಾರ್ಥಿಗಳು ತುಳು ಪಠ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದರು. ಎರಡೂ ಜಿಲ್ಲೆಗಳ ತಾಲೂಕುಗಳ ಪೈಕಿ ಪುತ್ತೂರಿ ನಲ್ಲಿ ಈ ಬಾರಿ ಅತೀ ಹೆಚ್ಚು ವಿದ್ಯಾರ್ಥಿ ಗಳಿದ್ದು, ಬೆಳ್ತಂಗಡಿ 2ನೇ ಸ್ಥಾನದಲ್ಲಿದೆ. ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಗರಿಷ್ಠ ಅಂದರೆ 70 (ಕಳೆದ ವರ್ಷ 197)ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ತುಳು ಪರೀಕ್ಷೆ ಬರೆಯಲಿದ್ದಾರೆ. ತುಳು ಕಲಿಯು ತ್ತಿರುವ 2,270 ವಿದ್ಯಾರ್ಥಿಗಳುಈ ಬಾರಿ ದ.ಕ., ಉಡುಪಿ ಜಿಲ್ಲೆಯ 43 ಶಾಲೆಯಲ್ಲಿ ಒಟ್ಟು 2,270 ವಿದ್ಯಾರ್ಥಿಗಳು 2020-21ರ ಸಾಲಿನಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ವ್ಯಾಸಂಗ ಮಾಡುತ್ತಿದ್ದಾರೆ. 6ನೇ ತರಗತಿಯಲ್ಲಿ 94, 7ನೇ ತರಗತಿಯಲ್ಲಿ 105, 8ನೇ ತರಗತಿಯಲ್ಲಿ 406, 9ನೇ ತರಗತಿಯಲ್ಲಿ 747 ಹಾಗೂ 10ನೇ ತರಗತಿಯಲ್ಲಿ 918 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಅಭ್ಯಸಿಸುತ್ತಿದ್ದಾರೆ. ಈ ಪೈಕಿ ಪುತ್ತೂರು ತಾಲೂಕಿನಲ್ಲಿ 1,114, ಸುಳ್ಯ ತಾಲೂಕಿನಲ್ಲಿ 144, ಬೆಳ್ತಂಗಡಿಯಲ್ಲಿ 573, ಬಂಟ್ವಾಳದಲ್ಲಿ 108, ಮಂಗಳೂರು ತಾಲೂಕಿನಲ್ಲಿ 136, ಉಡುಪಿ ತಾಲೂಕಿನಲ್ಲಿ 195 ವಿದ್ಯಾರ್ಥಿಗಳಿದ್ದಾರೆ. 2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಒಟ್ಟು 42 ಶಾಲೆಗಳಲ್ಲಿ ಒಟ್ಟು 2,600 ವಿದ್ಯಾರ್ಥಿಗಳು 6ನೇ ತರಗತಿಯಿಂದ ಎಸೆಸೆಲ್ಸಿವರೆಗೆ ತುಳು ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಹಿಂದಿನ ವರ್ಷಗಳಲ್ಲಿ ತುಳು ಭಾಷಾ ವಿಷಯದಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದಿದ್ದು , ಅದೇ ಮಾದರಿಯಲ್ಲಿ ಈ ವರ್ಷವೂ ವಿದ್ಯಾ ರ್ಥಿಗಳಿಗೆ ಬೋಧನೆ ಮಾಡಲಾಗಿದೆ. ಈ ಬಾರಿ ಎಸೆಸೆಲ್ಸಿಯಲ್ಲಿ ಒಟ್ಟು 918 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. -ದಯಾನಂದ ಕತ್ತಲಸಾರ್, ಅಧ್ಯಕ್ಷರು, ತುಳು ಸಾಹಿತ್ಯ ಅಕಾಡೆಮಿ ಪ್ರಥಮ ಬ್ಯಾ ಚ್ನಲ್ಲಿ 18 ವಿದ್ಯಾರ್ಥಿಗಳು :2014-15ರಲ್ಲಿ ಮಂಗಳೂರಿನ ಪೊಂಪೈ ಶಾಲೆಯಲ್ಲಿ ಎಸೆಸೆಲ್ಸಿ ಯಲ್ಲಿ ತುಳು ಪ್ರಥಮ ಬ್ಯಾಚ್ ಆರಂಭಗೊಂಡಿದ್ದು, ಒಟ್ಟು 18 ವಿದ್ಯಾರ್ಥಿಗಳು ಮೊದಲಿಗೆ ತುಳು ಪಠ್ಯದಲ್ಲಿ ಪರೀಕ್ಷೆ ಬರೆದಿ ದಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago