ಈ ಬಾರಿ ತುಳು ಪರೀಕ್ಷೆ ಬರೆಯಲಿರುವ 918 ವಿದ್ಯಾರ್ಥಿಗಳು-
ಮಹಾನಗರ: ತುಳು ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ರಾಜ್ಯ ಸರಕಾರವು 2014-15ನೇ ಸಾಲಿನಿಂದ ಎಸೆಸೆಲ್ಸಿಯಲ್ಲಿ ತುಳು ಪಠ್ಯ ವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಿದ್ದು, ದ.ಕ,ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿ 918 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜು. 22ರಂದು ಎಸೆಸೆಲ್ಸಿ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಕಳೆದ ವರ್ಷ ಒಟ್ಟು 956 ವಿದ್ಯಾರ್ಥಿಗಳು ತುಳು ಪಠ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದರು. ಎರಡೂ ಜಿಲ್ಲೆಗಳ ತಾಲೂಕುಗಳ ಪೈಕಿ ಪುತ್ತೂರಿ ನಲ್ಲಿ ಈ ಬಾರಿ ಅತೀ ಹೆಚ್ಚು ವಿದ್ಯಾರ್ಥಿ ಗಳಿದ್ದು, ಬೆಳ್ತಂಗಡಿ 2ನೇ ಸ್ಥಾನದಲ್ಲಿದೆ. ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಗರಿಷ್ಠ ಅಂದರೆ 70 (ಕಳೆದ ವರ್ಷ 197)ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ತುಳು ಪರೀಕ್ಷೆ ಬರೆಯಲಿದ್ದಾರೆ. ತುಳು ಕಲಿಯು ತ್ತಿರುವ 2,270 ವಿದ್ಯಾರ್ಥಿಗಳುಈ ಬಾರಿ ದ.ಕ., ಉಡುಪಿ ಜಿಲ್ಲೆಯ 43 ಶಾಲೆಯಲ್ಲಿ ಒಟ್ಟು 2,270 ವಿದ್ಯಾರ್ಥಿಗಳು 2020-21ರ ಸಾಲಿನಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ವ್ಯಾಸಂಗ ಮಾಡುತ್ತಿದ್ದಾರೆ. 6ನೇ ತರಗತಿಯಲ್ಲಿ 94, 7ನೇ ತರಗತಿಯಲ್ಲಿ 105, 8ನೇ ತರಗತಿಯಲ್ಲಿ 406, 9ನೇ ತರಗತಿಯಲ್ಲಿ 747 ಹಾಗೂ 10ನೇ ತರಗತಿಯಲ್ಲಿ 918 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಅಭ್ಯಸಿಸುತ್ತಿದ್ದಾರೆ. ಈ ಪೈಕಿ ಪುತ್ತೂರು ತಾಲೂಕಿನಲ್ಲಿ 1,114, ಸುಳ್ಯ ತಾಲೂಕಿನಲ್ಲಿ 144, ಬೆಳ್ತಂಗಡಿಯಲ್ಲಿ 573, ಬಂಟ್ವಾಳದಲ್ಲಿ 108, ಮಂಗಳೂರು ತಾಲೂಕಿನಲ್ಲಿ 136, ಉಡುಪಿ ತಾಲೂಕಿನಲ್ಲಿ 195 ವಿದ್ಯಾರ್ಥಿಗಳಿದ್ದಾರೆ. 2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಒಟ್ಟು 42 ಶಾಲೆಗಳಲ್ಲಿ ಒಟ್ಟು 2,600 ವಿದ್ಯಾರ್ಥಿಗಳು 6ನೇ ತರಗತಿಯಿಂದ ಎಸೆಸೆಲ್ಸಿವರೆಗೆ ತುಳು ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಹಿಂದಿನ ವರ್ಷಗಳಲ್ಲಿ ತುಳು ಭಾಷಾ ವಿಷಯದಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದಿದ್ದು , ಅದೇ ಮಾದರಿಯಲ್ಲಿ ಈ ವರ್ಷವೂ ವಿದ್ಯಾ ರ್ಥಿಗಳಿಗೆ ಬೋಧನೆ ಮಾಡಲಾಗಿದೆ. ಈ ಬಾರಿ ಎಸೆಸೆಲ್ಸಿಯಲ್ಲಿ ಒಟ್ಟು 918 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. -ದಯಾನಂದ ಕತ್ತಲಸಾರ್, ಅಧ್ಯಕ್ಷರು, ತುಳು ಸಾಹಿತ್ಯ ಅಕಾಡೆಮಿ ಪ್ರಥಮ ಬ್ಯಾ ಚ್ನಲ್ಲಿ 18 ವಿದ್ಯಾರ್ಥಿಗಳು :2014-15ರಲ್ಲಿ ಮಂಗಳೂರಿನ ಪೊಂಪೈ ಶಾಲೆಯಲ್ಲಿ ಎಸೆಸೆಲ್ಸಿ ಯಲ್ಲಿ ತುಳು ಪ್ರಥಮ ಬ್ಯಾಚ್ ಆರಂಭಗೊಂಡಿದ್ದು, ಒಟ್ಟು 18 ವಿದ್ಯಾರ್ಥಿಗಳು ಮೊದಲಿಗೆ ತುಳು ಪಠ್ಯದಲ್ಲಿ ಪರೀಕ್ಷೆ ಬರೆದಿ ದಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…