ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಗಲಾಟೆಗಳಿಗೆ ಇದೀಗ ಬಿ.ಎಸ್ ಯಡಿಯೂರಪ್ಪ ಪುಲ್ ಸ್ಟಾಪ್ ಇಟ್ಟಿದ್ದು, ಈ ಬಾರಿ ಮತ್ತೆ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೇ ಅಭ್ಯರ್ಥಿ, ಅಲ್ಲದೆ ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದು, ಶೋಭಾ ಗೋಬ್ಯಾಕ್ ಅಭಿಯಾನದ ಬಗ್ಗೆ ಮಾಹಿತಿ ಪಡೆದುಕೊಂಡರು.ಈ ವೇಳೆ ಮಾತನಾಡಿದ ಯಡಿಯೂರಪ್ಪ, ಇಂಥ ಅಭಿಯಾನಕ್ಕೆ ಹೆದರಬೇಕಿಲ್ಲ. ಶೋಭಾ ಕರಂದ್ಲಾಜೆ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಇದು ಷಡ್ಯಂತ್ರದ ಒಂದು ಭಾಗವಾಗಿದೆ. ಇನ್ನು ಮೂರು ದಿನದ ಒಳಗೆ ಎಲ್ಲವೂ ಗೊತ್ತಾಗುತ್ತೆ. 3 ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆ ಆಗಬಹುದು. ಶೋಭಾ ಕರಂದ್ಲಾಜೆ ಮೋದಿ ಸಂಪುಟದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ಶೋಭಾ ಕರಂದ್ಲಾಜೆ ಗೆಲ್ಲುತ್ತಾರೆ ಎಂದು ಹೇಳಿದರು. ಈ ಮೂಲಕ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಉಡುಪಿ-ಚಿಕ್ಕಮಗಳೂರು ಟಿಕೆಟ್ ಎನ್ನುವುದನ್ನು ಖಚಿತಪಡಿಸಿದರು.
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…