ಈ ಬಾರಿ ವಿಧಾನಸಭೆ ಚುನಾವಣೆ ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ : ನಳಿನ್ ಕುಮಾರ್ ಕಟೀಲ್ – Vishwanews24
ಈ ಬಾರಿ ವಿಧಾನಸಭೆ ಚುನಾವಣೆ ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ : ನಳಿನ್ ಕುಮಾರ್ ಕಟೀಲ್
ಭಟ್ಕಳ (ಉತ್ತರ ಕನ್ನಡ): ‘ಈ ಬಾರಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಲ್ಲ. ಬದಲಿಗೆ, ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದೆ. ದೇಶಭಕ್ತ ಸಾವರ್ಕರ್ ಬೇಕಾ ಅಥವಾ ಮತಾಂಧ ಟಿಪ್ಪು ಬೇಕಾ ಎಂದು ಜನ ತೀರ್ಮಾನಿಸುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳವಾರ ತಾಲ್ಲೂಕಿನ ಶಿರಾಲಿಯಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶದಲ್ಲಿ ಅವರು, ‘ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಹೆಸರಿನಲ್ಲಿ ಹಿಂದೂ, ಮುಸ್ಲಿಮರನ್ನು ಒಡೆದರು’ ಎಂದು ಹೇಳಿದರು.
ಮಂಗಳೂರು ಕಮಿಷನರ್ ಶಶಿಕುಮಾರ್ ನೇರವಾಗಿ ಭ್ರಷ್ಟಾಚಾರದಲ್ಲಿ ಭಾಗಿ : ಕಬೀರ್ ಉಳ್ಳಾಲ್ ಗಂಭೀರ ಆರೋಪ – Vishwanews24
‘ಇನ್ನೊಂದಡೆ, ಎಚ್.ಡಿ.ಕುಮಾರಸ್ವಾಮಿ ಈಗ ಅವಹೇಳನಕಾರಿ ಹೇಳಿಕೆ ನೀಡಿ ಬ್ರಾಹ್ಮಣ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಈ ಪಾರ್ಟಿಯವರು ಅಂದು ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದಿದ್ದರು’ ಎಂದು ಟೀಕಿಸಿದರು.
‘ಎಚ್ಡಿಕೆ ಅವರಿಗೆ ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವವಿದೆ. ಮತ್ತೆ ಸಿ.ಎಂ ಆಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೇ ಜಾತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.
ಹನಿ ನೀರಾವರಿ ಸಹಾಯಧನಕ್ಕೆ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ – Vishwanews24
