ಭಟ್ಕಳ (ಉತ್ತರ ಕನ್ನಡ): ‘ಈ ಬಾರಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಲ್ಲ. ಬದಲಿಗೆ, ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದೆ. ದೇಶಭಕ್ತ ಸಾವರ್ಕರ್ ಬೇಕಾ ಅಥವಾ ಮತಾಂಧ ಟಿಪ್ಪು ಬೇಕಾ ಎಂದು ಜನ ತೀರ್ಮಾನಿಸುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳವಾರ ತಾಲ್ಲೂಕಿನ ಶಿರಾಲಿಯಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶದಲ್ಲಿ ಅವರು, ‘ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಹೆಸರಿನಲ್ಲಿ ಹಿಂದೂ, ಮುಸ್ಲಿಮರನ್ನು ಒಡೆದರು’ ಎಂದು ಹೇಳಿದರು.
‘ಇನ್ನೊಂದಡೆ, ಎಚ್.ಡಿ.ಕುಮಾರಸ್ವಾಮಿ ಈಗ ಅವಹೇಳನಕಾರಿ ಹೇಳಿಕೆ ನೀಡಿ ಬ್ರಾಹ್ಮಣ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಈ ಪಾರ್ಟಿಯವರು ಅಂದು ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದಿದ್ದರು’ ಎಂದು ಟೀಕಿಸಿದರು.
‘ಎಚ್ಡಿಕೆ ಅವರಿಗೆ ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವವಿದೆ. ಮತ್ತೆ ಸಿ.ಎಂ ಆಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೇ ಜಾತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…