Featured

ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಸರ್ಕಾರ ರಚನೆ ಮಾಡೋದು ಗ್ಯಾರಂಟಿ  : ಸಿದ್ದರಾಮಯ್ಯ – Vishwanews24

ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆ ಮಾಡೋದು ಗ್ಯಾರಂಟಿ

ನವದೆಹಲಿ: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ನನ್ನ ಪ್ರಕಾರ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆ ಮಾಡೋದು ಗ್ಯಾರಂಟಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾವು 150 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ. ಮುಖ್ಯಮಂತ್ರಿಗಳ ಅಭಿಪ್ರಾಯ ಬೇರೆ, ಜನರ ಅಭಿಪ್ರಾಯ ಬೇರೆ. ಸಮೀಕ್ಷೆಯಲ್ಲಿ ಜನರು ಹೇಳಿದ್ದನ್ನೇ ಹೇಳ್ತಾರೆ. ಆದರೆ ಸಿಎಂ ಜನರ ಅಭಿಪ್ರಾಯ ಒಪ್ಪಲ್ಲ. ಈ ಬಾರಿ ಉತ್ತಮ ನಂಬರ್‌ಗಳೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡುತ್ತೆ ಎಂದು ಹೇಳಿದ್ದಾರೆ.

ಬಿಜೆಪಿ, ಜೆಡಿಎಸ್ ನಾಯಕರೂ ನಮ್ಮ ಸಂಪರ್ಕದಲ್ಲಿದ್ದಾರೆ. ಚುನಾವಣೆ ಇನ್ನೂ ದೂರ ಇದೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸೇರ್ಪಡೆ ಮಾಡಿಕೊಳ್ತೇವೆ. ಅವರಿಗೆ ಟಿಕೆಟ್ ನೀಡ್ತೇವೆ. ಎಷ್ಟು ಜನ ಸಂಪರ್ಕದಲ್ಲಿದ್ದಾರೆಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಜಿಎಸ್‌ಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಷ್ಟು ದಿನ ಜಿಎಸ್‌ಟಿ ನಷ್ಟವನ್ನು ಕೇಂದ್ರದಿಂದ ರಾಜ್ಯಗಳಿಗೆ ನೀಡಲಾಗುತ್ತಿತ್ತು. ಈ ಬೆಳವಣಿಗೆ ಇಂದಿಗೆ ಅಂತ್ಯವಾಗುತ್ತಿದ್ದು, ಕರ್ನಾಟಕಕ್ಕೆ 20 ಸಾವಿರ ಕೋಟಿ ನಷ್ಟವಾಗಲಿದೆ. ಸರ್ಕಾರಕ್ಕೆ ಒಂದು ಆದಾಯ ಮೂಲ ಕಡಿತವಾಗಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬುದ್ದಿ ಹೇಳಲು ಬಂದವರಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೂಪ

ನನ್ನ ಪ್ರಕಾರ ಇನ್ನೂ 5 ವರ್ಷ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡಬೇಕು. ಬಿಜೆಪಿ ಆಡಳಿತ ರಾಜ್ಯಗಳು ಹೇಳಲು ಶಕ್ತಿಯಿಲ್ಲದೇ ಕೇಂದ್ರದ ನಿರ್ಧಾರವನ್ನು ಒಪ್ಪಿಕೊಂಡಿವೆ. ಆದರೆ ಪರಿಹಾರ ಮುಂದುವರಿಸುವ ಬಗ್ಗೆ ಇನ್ನು ತಿರ್ಮಾನ ಆಗಿಲ್ಲ. ಹೀಗಾಗಿ ಪರಿಹಾರ ನೀಡದಿದ್ದರೂ ಸೆಸ್ ಹಾಕುವುದು ಮುಂದುವರಿಯಲಿದೆ. ಇದರಿಂದ ರಾಜ್ಯಗಳಿಗೆ ಯಾವುದೇ ಆದಾಯ ಬರಲ್ಲ. ಆದ್ದರಿಂದ ಸರ್ಕಾರ ಜಿಎಸ್‌ಟಿ ನೀಡುವುದನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

11 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

12 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

12 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

12 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

12 hours ago