ನವದೆಹಲಿ: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ನನ್ನ ಪ್ರಕಾರ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆ ಮಾಡೋದು ಗ್ಯಾರಂಟಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾವು 150 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ. ಮುಖ್ಯಮಂತ್ರಿಗಳ ಅಭಿಪ್ರಾಯ ಬೇರೆ, ಜನರ ಅಭಿಪ್ರಾಯ ಬೇರೆ. ಸಮೀಕ್ಷೆಯಲ್ಲಿ ಜನರು ಹೇಳಿದ್ದನ್ನೇ ಹೇಳ್ತಾರೆ. ಆದರೆ ಸಿಎಂ ಜನರ ಅಭಿಪ್ರಾಯ ಒಪ್ಪಲ್ಲ. ಈ ಬಾರಿ ಉತ್ತಮ ನಂಬರ್ಗಳೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡುತ್ತೆ ಎಂದು ಹೇಳಿದ್ದಾರೆ.
ಬಿಜೆಪಿ, ಜೆಡಿಎಸ್ ನಾಯಕರೂ ನಮ್ಮ ಸಂಪರ್ಕದಲ್ಲಿದ್ದಾರೆ. ಚುನಾವಣೆ ಇನ್ನೂ ದೂರ ಇದೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸೇರ್ಪಡೆ ಮಾಡಿಕೊಳ್ತೇವೆ. ಅವರಿಗೆ ಟಿಕೆಟ್ ನೀಡ್ತೇವೆ. ಎಷ್ಟು ಜನ ಸಂಪರ್ಕದಲ್ಲಿದ್ದಾರೆಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಜಿಎಸ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಷ್ಟು ದಿನ ಜಿಎಸ್ಟಿ ನಷ್ಟವನ್ನು ಕೇಂದ್ರದಿಂದ ರಾಜ್ಯಗಳಿಗೆ ನೀಡಲಾಗುತ್ತಿತ್ತು. ಈ ಬೆಳವಣಿಗೆ ಇಂದಿಗೆ ಅಂತ್ಯವಾಗುತ್ತಿದ್ದು, ಕರ್ನಾಟಕಕ್ಕೆ 20 ಸಾವಿರ ಕೋಟಿ ನಷ್ಟವಾಗಲಿದೆ. ಸರ್ಕಾರಕ್ಕೆ ಒಂದು ಆದಾಯ ಮೂಲ ಕಡಿತವಾಗಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬುದ್ದಿ ಹೇಳಲು ಬಂದವರಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೂಪ
ನನ್ನ ಪ್ರಕಾರ ಇನ್ನೂ 5 ವರ್ಷ ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ನೀಡಬೇಕು. ಬಿಜೆಪಿ ಆಡಳಿತ ರಾಜ್ಯಗಳು ಹೇಳಲು ಶಕ್ತಿಯಿಲ್ಲದೇ ಕೇಂದ್ರದ ನಿರ್ಧಾರವನ್ನು ಒಪ್ಪಿಕೊಂಡಿವೆ. ಆದರೆ ಪರಿಹಾರ ಮುಂದುವರಿಸುವ ಬಗ್ಗೆ ಇನ್ನು ತಿರ್ಮಾನ ಆಗಿಲ್ಲ. ಹೀಗಾಗಿ ಪರಿಹಾರ ನೀಡದಿದ್ದರೂ ಸೆಸ್ ಹಾಕುವುದು ಮುಂದುವರಿಯಲಿದೆ. ಇದರಿಂದ ರಾಜ್ಯಗಳಿಗೆ ಯಾವುದೇ ಆದಾಯ ಬರಲ್ಲ. ಆದ್ದರಿಂದ ಸರ್ಕಾರ ಜಿಎಸ್ಟಿ ನೀಡುವುದನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…