ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಈ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಗೆ ಕೌಂಟರ್ ನೀಡಿದೆ. ಈ ಒಂದು ಗೆಲುವಿನ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ಮೂರು ಕ್ಷೇತ್ರಗಳ ಗೆಲುವು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ, ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಅಂತ ನಾನು ಈ ಮೊದಲೇ ಹೇಳಿದ್ದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ. ಜನರ ಭಾವನೆಯ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು ಹಾಗಾಗಿ ಜನ ಆಶೀರ್ವದಿಸಿದ್ದಾರೆ.ಗ್ಯಾರಂಟಿ ಯೋಜನೆಗಳ ಕುರಿತಂತೆ ವಿಪಕ್ಷಗಳು ಅಪಪ್ರಚಾರ ಮಾಡಿದರು. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿಗೆ ಹಣ ಇಲ್ಲ ಅಂತ ಆರೋಪಿಸಿದ್ದರು ಆದರೆ ಈಗ ಒಂದೇ ಕ್ಷೇತ್ರಕ್ಕೆ ಕೋಟಿ ಕೋಟಿ ಹಣ ಹೋಗುತ್ತಿದೆ ಎಂದರು.
ಈ ಒಂದು ಉಪಚುನಾವಣೆಯ ಗೆಲುವು 2028 ರ ಚುನಾವಣೆಗೆ ದಿಕ್ಸೂಚಿಯಾಗಿದೆ. 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ ಹೇಳಿದ್ದೆ. ಬಿಜೆಪಿ ಜೆಡಿಎಸ್ ಮೈತ್ರಿಯಾದರೂ ನಮಗೆ ಗೆಲುವು ಸಿಕ್ಕಿದೆ. ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆನ್ನಾಗಿರುತ್ತೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ ಎಂದರು.
2028ರ ವಿಧಾನಸಭೆ ಚುನಾವಣೆಗೆ ಜನ ಮುನ್ನುಡಿ ಬರೆಯುತ್ತಿದ್ದಾರೆ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದ ಜನರು ಈಗ ಮುನ್ನುಡಿ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ಮೇಲೆ ಆರೋಪ ಮಾಡಿದ್ದರು. ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರು ಎಂದು ಪ್ರಚಾರ ಮಾಡಿದ್ದರು ಅದಕ್ಕೆ ಮತದಾರರೇ ಈಗ ಉತ್ತರ ನೀಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಅನೇಕ ಬಾರಿ ಟೀಕೆ ಮಾಡಿದ್ದಾರೆ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…