Featured

ಈ ವರ್ಷದ ಕನ್ನಡದ ಹಬ್ಬ ಪುನೀತ್‌‌ ರಾಜಕುಮಾರ್‌‌ಗೆ ಅರ್ಪಣೆ : ಹೆಚ್‌‌ಡಿಕೆ – Vishwanews24

ಈ ವರ್ಷದ ಕನ್ನಡದ ಹಬ್ಬ ಪುನೀತ್‌‌ ರಾಜಕುಮಾರ್‌‌ಗೆ ಅರ್ಪಣೆ : ಹೆಚ್‌‌ಡಿಕೆ -Vishwanews24

ಬೆಂಗಳೂರು: ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳು ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಟ್ವೀಟ್ ಮಾಡಿರುವ ಅವರು, 1500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ” ಎಂದರು.

“ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್‌ ರಾಜಕುಮಾರ್‌ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ” ಎಂದಿದ್ದಾರೆ.

ಇನ್ನು “ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 days ago