Featured

ಈ ವರ್ಷದ ಕನ್ನಡದ ಹಬ್ಬ ಪುನೀತ್‌‌ ರಾಜಕುಮಾರ್‌‌ಗೆ ಅರ್ಪಣೆ : ಹೆಚ್‌‌ಡಿಕೆ – Vishwanews24

ಈ ವರ್ಷದ ಕನ್ನಡದ ಹಬ್ಬ ಪುನೀತ್‌‌ ರಾಜಕುಮಾರ್‌‌ಗೆ ಅರ್ಪಣೆ : ಹೆಚ್‌‌ಡಿಕೆ -Vishwanews24

ಬೆಂಗಳೂರು: ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳು ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಟ್ವೀಟ್ ಮಾಡಿರುವ ಅವರು, 1500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ” ಎಂದರು.

“ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್‌ ರಾಜಕುಮಾರ್‌ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ” ಎಂದಿದ್ದಾರೆ.

ಇನ್ನು “ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ” ಎಂದು ಹೇಳಿದ್ದಾರೆ.

Vishwa News 24

Recent Posts

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

6 minutes ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

15 minutes ago

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ – vishwanews24

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ  ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…

28 minutes ago

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! vishwanews24

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…

35 minutes ago

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

18 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

22 hours ago