ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಯಾವಾಗ ಇಳೀತಿರಿ ಅಂತ ನಾವು ಕೇಳಿಲ್ಲ. ಇನ್ನೂ ಎರಡು ವರ್ಷ ನಾನೇ ಸಿಎಂ ಎಂದು ಹೇಳಿ ಅವರೇ ಸೆಲ್ಫ್ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ. ಬಿಜೆಪಿ ಶಾಸಕರು ಸಹ ಮಾತನಾಡುತ್ತಿದ್ದಾರೆ. ಇದನ್ನು ನೋಡಿದರೆ ಬಿಜೆಪಿಯಲ್ಲಿ ಏನೋ ನಡೆಯುತ್ತಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು.
ಹೊಸ ವರ್ಷದ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ಶುಭಾಶಯ ತಿಳಿಸಿ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನೆಮ್ಮದಿ ಮತ್ತು ಆರೋಗ್ಯಕ್ಕೆ ಸಂಕಟವಾಗಿತ್ತು. ಅವೆಲ್ಲಾ ನಿವಾರಣೆ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಶಾಲೆ ಮುಚ್ಚಬೇಕು ಅಂತ ನಾನು ಹೇಳುವುದಿಲ್ಲ. ಶಾಲೆಗೆ ಬಹಳ ದಿನ ಬ್ರೇಕ್ ಹಾಕಬಾರದು. ಇದರಿಂದ ಮಕ್ಕಳ ವರ್ತನೆ ಬದಲಾಗುತ್ತೆ. ಮಾತ್ರವಲ್ಲದೆ ಗುಣಮಟ್ಟದ ಶಿಕ್ಷಣದ ಮೇಲೆ ಸಮಸ್ಯೆ ಆಗುತ್ತದೆ ಎಂದರು.
ಕೋವಿಡ್ ನಿಯಮ ಪಾಲನೆ ಮಾಡಿಯೇ ಶಾಲಾ-ಕಾಲೇಜು ತೆರೆಯಲಿ. ಇಲ್ಲ ಅಂದ್ರೆ ವಿದ್ಯಾರ್ಥಿಗಳ ಪ್ರಗತಿ ಮೇಲೆ ದುಷ್ಪರಿಣಾಮ ಬೀರುತ್ತದೆ. ಬ್ರಿಟನ್ ರೂಪಾಂತರ ಹೊಂದಿದ ಕೋವಿಡ್ ವಿಚಾರದಲ್ಲಿ ಸರ್ಕಾರಕ್ಕೆ ಸಾಮಾನ್ಯ ಜ್ಞಾನ ಇರಬೇಕಿತ್ತು. ಅಲ್ಲಿಂದ ಬಂದವರನ್ನು ವಿಮಾನ ನಿಲ್ದಾಣದಲ್ಲಿಯೇ ಆರೋಗ್ಯ ತಪಾಸಣೆಗೊಳಪಡಿಸಬೇಕಿತ್ತು. ಇವತ್ತು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಆಡಳಿತ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ. ನಮ್ಮ ರಾಜ್ಯದವರು ಕೋವಿಡ್ ಹರಡಲಿಲ್ಲ. ಮೊದಲೇ ಸರ್ಕಾರ ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದರೇ ಈ ಸಮಸ್ಯೆ ಆಗುತ್ತಿರಲಿಲ್ಲ ಎಂದು ಕಿಡಿಕಾರಿದರು.
ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ನನಗೆ ಸಂತೋಷ ತಂದಿದೆ. ನಮ್ಮ ಬೆಂಬಲಿತ ಸದಸ್ಯರನ್ನ ಸೆಳೆಯುವ ಕೆಲಸ ಆಗುತ್ತಿದೆ. ಇವರ ದುಡ್ಡಿನ ನಡುವೆ ನಮ್ಮ ಬೆಂಬಲಿತ ಅಭ್ಯರ್ಥಿಗಳು ಗೆದ್ದು ಬಂದಿದ್ದಾರೆ. ನಾನು ರಾಜ್ಯ ಪ್ರವಾಸ ಮಾಡುತ್ತೇನೆ. ಈ ವರ್ಷ ಸಂಘಟನೆಯ ವರ್ಷ – ಹೋರಾಟದ ವರ್ಷ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…