Featured

ಈ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ : ಡಿಕೆ ಶಿವಕುಮಾರ್ -Vishwanews24

ಈ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ : ಡಿಕೆ ಶಿವಕುಮಾರ್

ಕೇಂದ್ರ, ರಾಜ್ಯ ಸರ್ಕಾರಗಳ ವೈಫಲ್ಯದಿಂದಲೇ ಕೊರೋನಾ ಹೆಚ್ಚಾಯ್ತು..

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಯಾವಾಗ ಇಳೀತಿರಿ ಅಂತ ನಾವು ಕೇಳಿಲ್ಲ. ಇನ್ನೂ ಎರಡು ವರ್ಷ ನಾನೇ ಸಿಎಂ ಎಂದು ಹೇಳಿ ಅವರೇ ಸೆಲ್ಫ್ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ. ಬಿಜೆಪಿ ಶಾಸಕರು ಸಹ ಮಾತನಾಡುತ್ತಿದ್ದಾರೆ. ಇದನ್ನು ನೋಡಿದರೆ ಬಿಜೆಪಿಯಲ್ಲಿ ಏನೋ ನಡೆಯುತ್ತಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು.

ಹೊಸ ವರ್ಷದ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ಶುಭಾಶಯ ತಿಳಿಸಿ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನೆಮ್ಮದಿ ಮತ್ತು ಆರೋಗ್ಯಕ್ಕೆ ಸಂಕಟವಾಗಿತ್ತು. ಅವೆಲ್ಲಾ ನಿವಾರಣೆ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಶಾಲೆ ಮುಚ್ಚಬೇಕು ಅಂತ ನಾನು ಹೇಳುವುದಿಲ್ಲ. ಶಾಲೆಗೆ ಬಹಳ ದಿನ ಬ್ರೇಕ್ ಹಾಕಬಾರದು. ಇದರಿಂದ ಮಕ್ಕಳ ವರ್ತನೆ ಬದಲಾಗುತ್ತೆ. ಮಾತ್ರವಲ್ಲದೆ ಗುಣಮಟ್ಟದ ಶಿಕ್ಷಣದ ಮೇಲೆ ಸಮಸ್ಯೆ ಆಗುತ್ತದೆ ಎಂದರು.

http://ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.

ಕೋವಿಡ್ ನಿಯಮ ಪಾಲನೆ ಮಾಡಿಯೇ ಶಾಲಾ-ಕಾಲೇಜು ತೆರೆಯಲಿ. ಇಲ್ಲ ಅಂದ್ರೆ ವಿದ್ಯಾರ್ಥಿಗಳ ಪ್ರಗತಿ ಮೇಲೆ ದುಷ್ಪರಿಣಾಮ ಬೀರುತ್ತದೆ. ಬ್ರಿಟನ್ ರೂಪಾಂತರ ಹೊಂದಿದ ಕೋವಿಡ್ ವಿಚಾರದಲ್ಲಿ ಸರ್ಕಾರಕ್ಕೆ ಸಾಮಾನ್ಯ ಜ್ಞಾನ ಇರಬೇಕಿತ್ತು. ಅಲ್ಲಿಂದ ಬಂದವರನ್ನು ವಿಮಾನ ನಿಲ್ದಾಣದಲ್ಲಿಯೇ ಆರೋಗ್ಯ ತಪಾಸಣೆಗೊಳಪಡಿಸಬೇಕಿತ್ತು. ಇವತ್ತು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಆಡಳಿತ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ. ನಮ್ಮ ರಾಜ್ಯದವರು ಕೋವಿಡ್ ಹರಡಲಿಲ್ಲ. ಮೊದಲೇ ಸರ್ಕಾರ ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದರೇ ಈ ಸಮಸ್ಯೆ ಆಗುತ್ತಿರಲಿಲ್ಲ ಎಂದು ಕಿಡಿಕಾರಿದರು.

ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ನನಗೆ ಸಂತೋಷ ತಂದಿದೆ. ನಮ್ಮ ಬೆಂಬಲಿತ ಸದಸ್ಯರನ್ನ ಸೆಳೆಯುವ ಕೆಲಸ ಆಗುತ್ತಿದೆ. ಇವರ ದುಡ್ಡಿನ ನಡುವೆ ನಮ್ಮ ಬೆಂಬಲಿತ ಅಭ್ಯರ್ಥಿಗಳು ಗೆದ್ದು ಬಂದಿದ್ದಾರೆ. ನಾನು ರಾಜ್ಯ ಪ್ರವಾಸ ಮಾಡುತ್ತೇನೆ. ಈ ವರ್ಷ ಸಂಘಟನೆಯ ವರ್ಷ – ಹೋರಾಟದ ವರ್ಷ ಎಂದರು.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

22 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

22 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

22 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

23 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

23 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

23 hours ago