Featured

ಈ ವರ್ಷ ದಾಖಲೆಯ ಎರಡು ಲಕ್ಷ ಭಾರತೀಯ ಮುಸ್ಲಿಮರು ಹಜ್‌ ಪ್ರಯಾಣ -Vishwanews24

ಹೊಸದಿಲ್ಲಿ,:  ಈ ವರ್ಷ ದಾಖಲೆಯ ಎರಡು ಲಕ್ಷ ಭಾರತೀಯ ಮುಸ್ಲಿಮರು ಹಜ್‌ ನಿರ್ವಹಿಸಲು ಪ್ರಯಾಣ ಬೆಳೆಸಲಿದ್ದಾರೆ, ಈ ಪೈಕಿ ಶೇ.48 ಮಹಿಳೆಯರು ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಮಂಗಳವಾರ ತಿಳಿಸಿದ್ದಾರೆ.

ಈ ವರ್ಷ 2,340ಕ್ಕೂ ಅಧಿಕ ಮಹಿಳೆಯರು ಪುರುಷರ ಜೊತೆಗಾರರು ಇಲ್ಲದೆ ಹಜ್‌ಗೆ ತೆರಳಲಿದ್ದಾರೆ. ಕಳೆದ ವರ್ಷ ಈ ಸಂಖ್ಯೆ 1,180 ಆಗಿತ್ತು. ಈ ಮಹಿಳೆಯರನ್ನು ಯಾವುದೇ ಲಾಟರಿ ವ್ಯವಸ್ಥೆಯಿಲ್ಲದೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಜ್ ಕೋಟ ಹೆಚ್ಚಾಗಿರುವ ಕಾರಣ ನಿರೀಕ್ಷಣಾ ಪಟ್ಟಿಯಲ್ಲಿದ್ದ ಎಲ್ಲರಿಗೂ ಈ ವರ್ಷ ಅವಕಾಶ ನೀಡಿರುವುದರಿಂದ ಇದೇ ಮೊದಲ ಬಾರಿ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಆಂಧ್ರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಎಲ್ಲ ಅರ್ಜಿದಾರರು ಹಜ್‌ಗೆ ತೆರಳಲಿದ್ದಾರೆ ಎಂದವರು ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ ನಂತರ ಇದೇ ಮೊದಲ ಬಾರಿ ಎರಡು ಲಕ್ಷ ಭಾರತೀಯ ಮುಸ್ಲಿಮರು 21 ವಿವಿಧ ವಿಮಾನ ನಿಲ್ದಾಣಗಳಿಂದ 500 ವಿಮಾನಗಳಲ್ಲಿ ಹಜ್‌ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ನಖ್ವಿ ತಿಳಿಸಿದ್ದಾರೆ.

ಹಜ್‌ಗೆ ತೆರಳುವ ವಿಮಾನಗಳು ದಿಲ್ಲಿ, ಗಯಾ,ಗುವಾಹತಿ ಮತ್ತು ಶ್ರೀನಗರದಿಂದ ಜುಲೈ 4ಕ್ಕೆ, ಬೆಂಗಳೂರು ಮತ್ತು ಕಲ್ಲಿಕೋಟೆಯಿಂದ ಜುಲೈ 7ಕ್ಕೆ, ಕೊಚ್ಚಿನ್‌ನಿಂದ ಜುಲೈ 14ಕ್ಕೆ, ಮಂಗಳೂರಿನಿಂದ ಜುಲೈ 17ಕ್ಕೆ, ಮುಂಬೈಯಿಂದ ಜುಲೈ 14 ಮತ್ತು 21ಕ್ಕೆ ಹಾಗೂ ಶ್ರೀನಗರದಿಂದ ಜುಲೈ 21ಕ್ಕೆ ಪ್ರಯಾಣ ಬೆಳೆಸಲಿವೆ. ಎರಡನೇ ಹಂತದಲ್ಲಿ, ವಿಮಾನಗಳು, ಅಹ್ಮದಾಬಾದ್, ಜೈಪುರ ಮತ್ತು ಲಕ್ನೋದಿಂದ ಜುಲೈ 20ಕ್ಕೆ, ಭೋಪಾಲ ಮತ್ತು ರಾಂಚಿಯಿಂದ ಜುಲೈ 21ಕ್ಕೆ, ಔರಂಗಾಬಾದ್‌ನಿಂದ ಜುಲೈ 22ಕ್ಕೆ, ಕೋಲ್ಕತಾ ಮತ್ತು ನಾಗ್ಪುರದಿಂದ ಜುಲೈ 25ಕ್ಕೆ, ಹೈದರಾಬಾದ್‌ನಿಂದ ಜುಲೈ 26ಕ್ಕೆ, ವಾರಣಾಸಿಯಿಂದ ಜುಲೈ 29ಕ್ಕೆ ಮತ್ತು ಚೆನ್ನೈಯಿಂದ ಜುಲೈ 31ಕ್ಕೆ ಹಜ್‌ಗೆ ಪ್ರಯಾಣ ಬೆಳೆಸಲಿವೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago