Featured

ಈ ಸರ್ಕಾರಕ್ಕೆ ಸಮಸ್ಯೆಯನ್ನು ನಿಭಾಯಿಸುವ ಶಕ್ತಿಯೇ ಇಲ್ಲ : ಸಿದ್ದರಾಮಯ್ಯ -Vishwanews24

ಮುಖ್ಯಮಂತ್ರಿ ಬದಲಾವಣೆಗೆ ಆರ್‌ಎಸ್‌ಎಸ್‌ ಬಯಸಿದೆ..

ಈ ಸರ್ಕಾರಕ್ಕೆ ಸಮಸ್ಯೆಯನ್ನು ನಿಭಾಯಿಸುವ ಶಕ್ತಿಯೇ ಇಲ್ಲ : ಸಿದ್ದರಾಮಯ್ಯ -Vishwanews24

ರಾಯಚೂರು (Vishwanews24) : ”ಮುಖ್ಯಮಂತ್ರಿ ಬದಲಾವಣೆಗೆ ಆರ್‌ಎಸ್‌ಎಸ್‌ ಬಯಸಿದೆ. ಬಿಎಸ್‌ವೈ ಬದಲಾವಣೆಗೆ ಬಸನಗೌಡ ಯತ್ನಾಳ ಹಾಗೂ ಈಶ್ವರಪ್ಪ ಅವರಿಗೆ ಆರ್‌ಎಸ್‌ಎಸ್‌ ಹಾಗೂ ಸಂತೋಷ್‌ ಬೆಂಬಲವಿದೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಆಗಮಿಸಿರುವ ಅವರು ಮಂಗಳವಾರ ಪಗಡದಿನ್ನಿ ಕ್ಯಾಂಪ್‌ನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ”ಮುಖ್ಯಮಂತ್ರಿ ಬದಲಾವಣೆಗೆ ಆರ್‌ಎಸ್‌ಎಸ್‌ ಬಯಸಿದೆ. ಅದಕ್ಕಾಗಿ ಈಶ್ವರಪ್ಪ, ಯತ್ನಾ‌ಳ್‌ಗೆ ಬೆಂಬಲಿಸಿದೆ. ಆದರೆ ಈ ಸರ್ಕಾರಕ್ಕೆ ಸಮಸ್ಯೆಯನ್ನು ನಿಭಾಯಿಸುವ ಶಕ್ತಿಯೇ ಇಲ್ಲ” ಎಂದು ಟೀಕಿಸಿದರು.

ಮಂಗಳೂರು : ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ : ಯು.ಟಿ ಖಾದರ್ -Vishwanews24

”ಸಚಿವ ಈಶ್ವರಪ್ಪ ಅವರು ಪತ್ರ ಬರೆದದ್ದು ಗಂಭೀರವಾದ ವಿಚಾರ. ಸುಮಾರು ನಾಲ್ಕು ತಿಂಗಳಿನಿಂದ ಬಸನಗೌಡ ಯತ್ನಾಳ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ. ಆದರೆ ಸರ್ಕಾರ ಯಾಕೆ ಯಾವ ಕ್ರಮವನ್ನೂ ಕೈಗೊಂಡಿಲ್ಲ” ಎಂದು ಪ್ರಶ್ನಿಸಿದರು.

ಇನ್ನು, ”ವರುಣ ಕ್ಷೇತ್ರಕ್ಕೆ ‌ಯಡಿಯೂರಪ್ಪ ಮತ್ತು ವಿಜಯೇಂದ್ರ ಯಾವ ಕೊಡುಗೆ ನೀಡಿದ್ದಾರೆ? ವಿಜಯೇಂದ್ರ ಚಾಣಕ್ಯನೇ ಆಗಿದ್ದರೆ ಯಡಿಯೂರಪ್ಪ ಕೆಜೆಪಿ ಸ್ಥಾಪಿಸಿದಾಗ ಅವನು ಎಲ್ಲಿಗೆ ಹೋಗಿದ್ದ” ಎಂದು ಪ್ರಶ್ನಿಸಿದ ಅವರು, ”ವರುಣದಲ್ಲಿ ಯಾರೂ ಸ್ಪರ್ಧಿಸಿದರೂ ಸ್ವಾಗತಿಸುತ್ತೇನೆ” ಎಂದು ಹೇಳಿದರು.

‘ಸಿದ್ದರಾಮಯ್ಯ ಜೆಡಿಎಸ್ ತೊರೆದು ಕಾಂಗ್ರೆಸ್‌ ಯಾಕೆ ಸೇರಿದ್ದಾರೆ’ ಎಂಬ ಶಾಸಕ ರೇಣುಕಾಚಾರ್ಯರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ”ನಾನು ಜೆಡಿಎಸ್‌ ಬಿಟ್ಟು ಬಂದದಲ್ಲ. ಡಿಸಿಎಂ ಸ್ಥಾನದಿಂದ ಮಿಸ್ಟರ್ ದೇವೇಗೌಡ ತೆಗೆದರು. ಆಗ ಅಹಿಂದ ಕಟ್ಟಿದೆ. ಬಳಿಕ ಕಾಂಗ್ರೆಸ್‌ನವರು ಕರೆದಿದ್ದು ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿಯೇ ನಾನು ಕಾಂಗ್ರೆಸ್‌ಗೆ ಸೇರಿದೆ. ನಾನು ಪ್ರತಾಪಗೌಡ ತರಹ ದುಡ್ಡು ತಗೊಂಡು ಕಾಂಗ್ರೆಸ್‌ಗೆ ಬಂದವನಲ್ಲ” ಎಂದು ಟಾಂಗ್‌ ನೀಡಿದರು.

ಕಾಪು : ಖ್ಯಾತ ಸಾಹಿತಿ, ಬರಹಗಾರ್ತಿ ಮಮ್ತಾಜ್ ಬೇಗಂ ವಿಧಿವಶ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

31 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

41 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

1 hour ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago