Featured

ಈ ಸರ್ಕಾರಕ್ಕೆ ಸಮಸ್ಯೆಯನ್ನು ನಿಭಾಯಿಸುವ ಶಕ್ತಿಯೇ ಇಲ್ಲ : ಸಿದ್ದರಾಮಯ್ಯ -Vishwanews24

ಮುಖ್ಯಮಂತ್ರಿ ಬದಲಾವಣೆಗೆ ಆರ್‌ಎಸ್‌ಎಸ್‌ ಬಯಸಿದೆ..

ಈ ಸರ್ಕಾರಕ್ಕೆ ಸಮಸ್ಯೆಯನ್ನು ನಿಭಾಯಿಸುವ ಶಕ್ತಿಯೇ ಇಲ್ಲ : ಸಿದ್ದರಾಮಯ್ಯ -Vishwanews24

ರಾಯಚೂರು (Vishwanews24) : ”ಮುಖ್ಯಮಂತ್ರಿ ಬದಲಾವಣೆಗೆ ಆರ್‌ಎಸ್‌ಎಸ್‌ ಬಯಸಿದೆ. ಬಿಎಸ್‌ವೈ ಬದಲಾವಣೆಗೆ ಬಸನಗೌಡ ಯತ್ನಾಳ ಹಾಗೂ ಈಶ್ವರಪ್ಪ ಅವರಿಗೆ ಆರ್‌ಎಸ್‌ಎಸ್‌ ಹಾಗೂ ಸಂತೋಷ್‌ ಬೆಂಬಲವಿದೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಆಗಮಿಸಿರುವ ಅವರು ಮಂಗಳವಾರ ಪಗಡದಿನ್ನಿ ಕ್ಯಾಂಪ್‌ನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ”ಮುಖ್ಯಮಂತ್ರಿ ಬದಲಾವಣೆಗೆ ಆರ್‌ಎಸ್‌ಎಸ್‌ ಬಯಸಿದೆ. ಅದಕ್ಕಾಗಿ ಈಶ್ವರಪ್ಪ, ಯತ್ನಾ‌ಳ್‌ಗೆ ಬೆಂಬಲಿಸಿದೆ. ಆದರೆ ಈ ಸರ್ಕಾರಕ್ಕೆ ಸಮಸ್ಯೆಯನ್ನು ನಿಭಾಯಿಸುವ ಶಕ್ತಿಯೇ ಇಲ್ಲ” ಎಂದು ಟೀಕಿಸಿದರು.

ಮಂಗಳೂರು : ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ : ಯು.ಟಿ ಖಾದರ್ -Vishwanews24

”ಸಚಿವ ಈಶ್ವರಪ್ಪ ಅವರು ಪತ್ರ ಬರೆದದ್ದು ಗಂಭೀರವಾದ ವಿಚಾರ. ಸುಮಾರು ನಾಲ್ಕು ತಿಂಗಳಿನಿಂದ ಬಸನಗೌಡ ಯತ್ನಾಳ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ. ಆದರೆ ಸರ್ಕಾರ ಯಾಕೆ ಯಾವ ಕ್ರಮವನ್ನೂ ಕೈಗೊಂಡಿಲ್ಲ” ಎಂದು ಪ್ರಶ್ನಿಸಿದರು.

ಇನ್ನು, ”ವರುಣ ಕ್ಷೇತ್ರಕ್ಕೆ ‌ಯಡಿಯೂರಪ್ಪ ಮತ್ತು ವಿಜಯೇಂದ್ರ ಯಾವ ಕೊಡುಗೆ ನೀಡಿದ್ದಾರೆ? ವಿಜಯೇಂದ್ರ ಚಾಣಕ್ಯನೇ ಆಗಿದ್ದರೆ ಯಡಿಯೂರಪ್ಪ ಕೆಜೆಪಿ ಸ್ಥಾಪಿಸಿದಾಗ ಅವನು ಎಲ್ಲಿಗೆ ಹೋಗಿದ್ದ” ಎಂದು ಪ್ರಶ್ನಿಸಿದ ಅವರು, ”ವರುಣದಲ್ಲಿ ಯಾರೂ ಸ್ಪರ್ಧಿಸಿದರೂ ಸ್ವಾಗತಿಸುತ್ತೇನೆ” ಎಂದು ಹೇಳಿದರು.

‘ಸಿದ್ದರಾಮಯ್ಯ ಜೆಡಿಎಸ್ ತೊರೆದು ಕಾಂಗ್ರೆಸ್‌ ಯಾಕೆ ಸೇರಿದ್ದಾರೆ’ ಎಂಬ ಶಾಸಕ ರೇಣುಕಾಚಾರ್ಯರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ”ನಾನು ಜೆಡಿಎಸ್‌ ಬಿಟ್ಟು ಬಂದದಲ್ಲ. ಡಿಸಿಎಂ ಸ್ಥಾನದಿಂದ ಮಿಸ್ಟರ್ ದೇವೇಗೌಡ ತೆಗೆದರು. ಆಗ ಅಹಿಂದ ಕಟ್ಟಿದೆ. ಬಳಿಕ ಕಾಂಗ್ರೆಸ್‌ನವರು ಕರೆದಿದ್ದು ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿಯೇ ನಾನು ಕಾಂಗ್ರೆಸ್‌ಗೆ ಸೇರಿದೆ. ನಾನು ಪ್ರತಾಪಗೌಡ ತರಹ ದುಡ್ಡು ತಗೊಂಡು ಕಾಂಗ್ರೆಸ್‌ಗೆ ಬಂದವನಲ್ಲ” ಎಂದು ಟಾಂಗ್‌ ನೀಡಿದರು.

ಕಾಪು : ಖ್ಯಾತ ಸಾಹಿತಿ, ಬರಹಗಾರ್ತಿ ಮಮ್ತಾಜ್ ಬೇಗಂ ವಿಧಿವಶ -Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

9 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

10 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

10 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

10 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

14 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

15 hours ago