ಬೆಂಗಳೂರು: ಈ ಸರ್ಕಾರದಲ್ಲಿ ನಾನು ಮಂತ್ರಿ ಆಗಲ್ಲ ಎಂದು ಮಾಜಿ ಸಚಿವ ರೋಷನ್ ಬೇಗ್ ಆಕ್ರೋಶ ಹೊರಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಅಂತಿದ್ರಲ್ಲಾ ಈಗಲಾದರೂ ಇಳಿದು ಬಾ ಇಳಿದು ಬಾ ಎಂದು ಸಿದ್ದರಾಮಯ್ಯ ರೀತಿಯಲ್ಲಿ ವ್ಯಂಗ್ಯವಾಡಿದರು, ಸಿದ್ದರಾಮಯ್ಯಗೆ ನಂದೇ ನಡಿಬೇಕು. ನಾನೇ ಹೇಳಿದ ಹಾಗೇ ನಡಿಬೇಕು ಅನ್ನೋ ಅಹಂ ಭಾವನೆ ಇದೆ. ನಾನೇ ಸಿಎಂ ನಾನೇ ಸಿಎಂ ಅಂತಾ ಹೇಳ್ತಾ ಇದ್ರಿ 2018ರಲ್ಲಿ ಏನು ಫಲಿತಾಂಶ ಬಂತೋ ಈಗಲೂ ಅದೇ ಆಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶಗೊಂಡರು.
ನಾನೇ ಹೇಳಿದ ಹಾಗೇ ಎಲ್ಲಾ ಕೇಳಬೇಕು ಅನ್ನೋ ಇಗೋ ಇದೆ. ಅವರಪ್ಪರಾಣೆ ಮುಖ್ಯಮಂತ್ರಿ ಆಗಲ್ಲ ಅಂತ ಹೇಳಿ ಕುಮಾರಸ್ವಾಮಿಯನ್ನು ಸಿಎಂ ಮಾಡಿದ್ರಲ್ಲಾ ಎಂದು ಇದೇ ವೇಳೆ ಟೀಕೆ ಮಾಡಿದರು.
ನಾನು ಯಾವುದೇ ನೋಟೀಸ್ ಗೂ ಉತ್ತರ ಕೊಡಲ್ಲ, ಪಕ್ಷ ಬಿಡುವುದು ಇಲ್ಲ, ಬೇರೆ ಪಕ್ಷ ಸೇರುವುದೂ ಇಲ್ಲ, ನನ್ನ ಸ್ನೇಹಿತ ರಾಮಲಿಂಗಾ ರೆಡ್ಡಿ ಜೊತೆ ನಾನಿದ್ದೇನೆ. ರಾಹುಲ್ ಗಾಂಧಿ ಅವರಲ್ಲಿ ಕ್ಷಮೆ ಕೇಳುತ್ತೇನೆ. ರಾಜ್ಯದ ಇಂತಹ ಕಾಂಗ್ರೆಸ್ ಮುಖಂಡರೆಲ್ಲಾ ಅಲ್ಲಿ ಹೋಗಿ ರಾಹುಲ್ ಗಾಂಧಿಗೆ ಮಿಸ್ ಗೈಡ್ ಮಾಡ್ತಿದ್ದಾರೆ. ದಿನೇಶ ಗುಂಡೂರಾವ್ ಅಪ್ರಬುದ್ಧ ಹಾಗೂ ವಿಫಲ ಅಧ್ಯಕ್ಷ ಎಂದು ಕೆಪಿಸಿಸಿ ಅಧ್ಯಕ್ಷರ ವಿರುದ್ಧ ವಾಗ್ದಾಳಿ ನಡೆಸಿದರು
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…