ಮಂಗಳೂರು: “ಜನರನ್ನು ಮಂಗ ಮಾಡಲು ಅತ್ಯಂತ ಶ್ರೇಷ್ಠ ನಟ ದೇಶದ ನಾಯಕನಾಗಿದ್ದಾನೆ. 2019ರಲ್ಲಿ ಆತ ಗುಹೆ ಸೇರಿಕೊಂಡ. ಈಗ ಕ್ಯಾಮರಾ ಹಿಡಿದುಕೊಂಡು ನೀರೊಳಗೆ ಸೇರಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ” ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ ನಡೆಸಿದ್ದಾರೆ.
ನಗರದ ತೊಕ್ಕೊಟ್ಟಿನ ಯುನಿಟಿ ಮೈದಾನದಲ್ಲಿ ಇಂದು ನಡೆದ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
“ಈ ಹಿಂದೆ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುವ ನಾಯಕರಿದ್ದರು. ಆದರೆ ಈಗ ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕನಿದ್ದಾನೆ. ದಿನಕ್ಕೆ ಐದು ಕಾಸ್ಟ್ಯೂಮ್ ಚೇಂಜ್ ಮಾಡುತ್ತಾನೆ. ಕರ್ಕಶವಾದ ಲೌಡ್ ಸ್ಪೀಕರ್ ಅವನು. ಈತ ವಂದೇ ಭಾರತ್ಗೆ ಬಾವುಟ ತೋರಿಸಿದಷ್ಟು ಬಾವುಟವನ್ನು ಸ್ಟೇಷನ್ ಮಾಸ್ಟರ್ ಸಹ ತೋರಿಸಿರಲಿಕ್ಕಿಲ್ಲ” ಎಂದರು.
“ಕಲಾವಿದನಾಗಿ ಮಾತನಾಡಬೇಕಾಗುವುದು ನನ್ನ ಜವಾಬ್ದಾರಿ. ಸಮಸ್ಯೆಗಳಾದಾಗ ಬಂದು ನಾನು ನಿಲ್ಲಬೇಕಿದೆ. ದೇಹಕ್ಕಾದ ಗಾಯಗಳು ಸುಮ್ಮನಿದ್ದರೂ ಶಮನವಾಗುತ್ತವೆ. ಆದರೆ ದೇಶಕ್ಕಾದ ಗಾಯ ನಾವು ಸುಮ್ಮನಿದ್ದಷ್ಟೂ ಹೆಚ್ಚಾಗುತ್ತದೆ. ಒಬ್ಬ ಕಲಾವಿದ ಮೌನವಾದರೆ ಇಡೀ ಸಮಾಜ ಮೌನವಾದಂತೆ. ಪ್ರಜಾಪ್ರಭುತ್ವದಲ್ಲಿ ಸೂಕ್ಷ್ಮತೆ ಇರಬೇಕು” ಎಂದು ಹೇಳಿದರು.
“ಆರ್ಎಸ್ಎಸ್, ಬಿಜೆಪಿಯಂತಹ ಕಿಡ್ನ್ಯಾಪ್ ಟೀಮ್ ದೇಶದಲ್ಲಿ ಬೇರೆ ಇಲ್ಲ. ಮಾತೆತ್ತಿದ್ರೆ ರಾಮಮಂದಿರ, ಮಸೀದಿ, ಹಿಂದೂ ಧರ್ಮ ಅಂತಾರೆ. ಎಷ್ಟು ಅಂತಾ ಅಗೀತಾ ಹೋಗ್ತೀರಾ?. ಮುಂದೆ ಹರಪ್ಪ, ಮೊಹೆಂಜದಾರೋ ಸಿಗಬಹುದು. ಹಾಗಾದರೆ ಮತ್ತೆ ಶಿಲಾಯುಗಕ್ಕೆ ಹೋಗ್ತೀರಾ ಎಂದು ಪ್ರಶ್ನಿಸಿದರು.
“ಪೆಟ್ರೋಲ್ ಮುಸ್ಲಿಂ ರಾಷ್ಟ್ರದಲ್ಲಿ ಸಿಗುತ್ತೆ. ಹಾಗಾದ್ರೆ ಪೆಟ್ರೋಲ್ ಬೇಡ ಅಂತಾ ಎತ್ತಿನಗಾಡಿಯಲ್ಲಿ ಹೋಗ್ತೀರಾ?. ಈ ಸಲ ಗೆದ್ದರೆ ಇನ್ನಷ್ಟು ನಾಚಿಕೆ ಮಾನ, ಮರ್ಯಾದೆ ಕಳೆದುಕೊಳ್ಳುತ್ತಾನೆ. ಹಿಂದೂ ರಾಷ್ಟ್ರ ಮಾಡಲು ಈ ಮಂಗಗಳು ತಿರುಗಾಡ್ತಿವೆ. ಹಿಂದೂ ರಾಷ್ಟ್ರ ಆದ ಮೇಲೆ ಮತ್ತೆ ಜಾತಿ ಪದ್ಧತಿ ಶುರು ಮಾಡುತ್ತಾರೆ” ಎಂದರು.
“ಫೇಕ್ ಡಿಗ್ರಿಯಲ್ಲಿ ಓಡಾಡುತ್ತಿರುವವನಿಗೆ ಇದೆಲ್ಲಾ ಹೇಗೆ ಗೊತ್ತಾಗುತ್ತೆ?. ಪಾರ್ಲಿಮೆಂಟ್ ಮೇಲೆ ನಾಲ್ಕೈದು ಯುವಕ-ಯುವತಿಯರು ದಾಳಿ ಮಾಡಿದರು. ಯುವಕರು ಏಕೆ ಹಾಗೆ ಮಾಡಿದರು ಎಂದು ನಾವು ಯೋಚನೆ ಮಾಡಬೇಕು. ನಿರುದ್ಯೋಗ ಸಮಸ್ಯೆ ಇದೆ ಎಂದು ಯುವಕರು ಹೇಳ್ತಿದ್ದಾರೆ. ಬಾಲ್ಯದಲ್ಲಿದ್ದಾಗ ಮಂಗಳೂರು ಹೀಗಾಗುತ್ತೆ ಎಂದು ಗೊತ್ತಿರಲಿಲ್ಲ. ಎಷ್ಟು ಜನ ಯುವಕರು ಜೈಲಿನಲ್ಲಿ ಕೊಳೀತಾ ಇದ್ದಾರೆ. ಗಲಾಟೆ ಮಾಡಿಸುವ ಒಬ್ಬ ಜನಪ್ರತಿನಿಧಿಯ ಮಕ್ಕಳು ಜೈಲಿನಲ್ಲಿದ್ದಾರಾ?” ಎಂದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…