ಬೆಂಗಳೂರು : ಉಕ್ರೇನ್ನಲ್ಲಿ ಸಿಲುಕಿದ್ದ ಕರ್ನಾಟಕದ 694 ವಿದ್ಯಾರ್ಥಿಗಳ ಪೈಕಿ 86 ಮಂದಿ ಇದುವರೆಗೂ ವಾಪಸ್ ಆಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರಿ ಮನೋಜ್ ರಂಜನ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮನೋಜ್ ರಂಜನ್, ಕರ್ನಾಟಕದ 694 ಜನರು ಉಕ್ರೇನ್ನಲ್ಲಿ ಸಿಲುಕಿದ್ದು, ಫೆಬ್ರವರಿ 27 ರಿಂದ ಬುಧವಾರದ ತನಕ 86 ಜನರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ ಎಂದರು.
ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಕುಟುಂಬಸ್ಥರನ್ನು ಸರ್ಕಾರದ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬುತ್ತಿದ್ದು, 314 ಜನರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. 425 ಪೋಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಲಾಗಿದೆ ಎಂದಿದ್ದಾರೆ.
ಇನ್ನು ಯಾವ ಯಾವ ಜಿಲ್ಲೆಗಳ ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಕಳುಹಿಸಿಕೊಡಲಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಪೋಷಕರನ್ನು ಭೇಟಿ ಮಾಡಿ ರಕ್ಷಣಾ ಕಾರ್ಯಾಚರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…